Select Your Language

Notifications

webdunia
webdunia
webdunia
webdunia

ರಾಘವೇಶ್ವರ್ ಸ್ವಾಮೀಜಿಗೆ ಬೆದರಿಕೆ: ಉಗ್ರಪ್ಪ ವಿರುದ್ಧ ಪ್ರತಿದೂರು!

ರಾಘವೇಶ್ವರ್ ಸ್ವಾಮೀಜಿಗೆ ಬೆದರಿಕೆ: ಉಗ್ರಪ್ಪ ವಿರುದ್ಧ ಪ್ರತಿದೂರು!
ಬೆಂಗಳೂರು , ಮಂಗಳವಾರ, 27 ಡಿಸೆಂಬರ್ 2016 (10:02 IST)
ರಾಮಚಂದ್ರಾಪುರ ಮಠದ ರಾಘವೇಶ್ವರ್ ಸ್ವಾಮೀಜಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕುತ್ತಿರುವುದಕ್ಕೆ ಹಾಗೂ ಸತ್ಯ ಶೋಧನಾ ಮಿತ್ರ ಮಂಡಳಿಯ ವರ್ತನೆಗೆ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಪ್ರಚೋದನಕಾರಿ ಮಾತುಗಳೇ ಕಾರಣವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಠದ ಆಡಳಿತ ಮಂಡಳಿ ಪ್ರತಿದೂರು ನೀಡಿದೆ. 
 
ಸ್ವಾಮೀಜಿಯನ್ನು ಗುಂಡಕ್ಕಿ ಕೊಲ್ಲಬೇಕು ಎಂದು ಫೇಸ್‌ಬುಕ್ ಹಾಗೂ ವಾಟ್ಸಪ್‌ನಲ್ಲಿ ಸಂದೇಶ  ರವಾನಿಸುತ್ತಿದ್ದಾರೆ. ಸಮಾಜದಲ್ಲಿ ಕಲಹ ಉಂಟಾಗಲು ಕಾರಣರಾಗಿರುವ ಉಗ್ರಪ್ಪ ಹಾಗೂ ಬೆದರಿಕೆ ಸಂದೇಶ ರವಾನಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಠದ ಆಡಳಿತ ಮಂಡಳಿ ಆಗ್ರಹಿಸಿದೆ.
 
ರಾಘವೇಶರ್ ಶ್ರೀಗಳ ವಿರುದ್ಧದ ಪ್ರಕರಣದ ಕುರಿತು ತ್ವರಿತ ತನಿಖೆಯನ್ನು ನಡೆಸುವಂತೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಶ್ರೀಗಳ ಬೆಂಬಲಿಗರೆ ಫೇಸ್‌ಬುಕ್‌ನಲ್ಲಿ ಬೆದರಿಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ ಎಂದು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ದೂರು ಸಲ್ಲಿಸಿದರು.
 
ಶಾಸಕನಾದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆಯೆಂದರೆ ಜನಸಾಮಾನ್ಯರ ಪಾಡೇನು ಎಂದು ಆಕ್ರೋಶ ವ್ಯಕ್ತಪಡಿಸಿದ ಉಗ್ರಪ್ಪ, ಪೊಲೀಸರು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಲಾಂಛನ ನಿರ್ಮಾತೃನ ನಿರ್ಗಮನ