Select Your Language

Notifications

webdunia
webdunia
webdunia
webdunia

ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಎನ್‌.ಆರ್.ರಮೇಶ್

ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಎನ್‌.ಆರ್.ರಮೇಶ್
ಬೆಂಗಳೂರು , ಸೋಮವಾರ, 8 ಮೇ 2017 (14:05 IST)
ವಸತಿ ಖಾತೆ ಸಚಿವ ಎಂ.ಕೃಷ್ಣಪ್ಪ ವಿರುದ್ಧದ ಹಗರಣ ಬಯಲಿಗೆ ತಂದಿದ್ದರಿಂದ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಹೇಳಿದ್ದಾರೆ.
 
ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರು ನನ್ನ ಮೇಲೆ ಅಟ್ಯಾಕ್ ಮಾಡಿ ಬೆದರಿಕೆ ಹಾಕಿದರು.ಇಂತಹ ಕೊಲೆ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಬೆದರಿಕೆಗಳಿಗೆ ಹೆದರಿದರೆ ಹೋರಾಟ ಮಾಡಲಾಗುವುದಿಲ್ಲ
 
ಜಯನಗರ, ರಘುವರಹಳ್ಳಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಅಕ್ರಮವಾಗಿ ಭೂಮಿಯನ್ನು ಕಬಳಿಸಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದಾಖಲೆಗಳೊಂದಿಗೆ ಬಿಡುಗಡೆ ಮಾಡುತ್ತೇನೆ ಎಂದು ಗುಡುಗಿದ್ದಾರೆ.
 
ಬೆದರಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು ನಾಳೆ ಪ್ರತಿಭಟನೆ ನಡೆಸಲಿದೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಸಂಕಷ್ಟ