Select Your Language

Notifications

webdunia
webdunia
webdunia
Saturday, 12 April 2025
webdunia

ಜೆಡಿಎಸ್ ನ ಶಾಸಕನಿಗೆ ಮತ ನೀಡಿದ ಮತದಾರನಿಂದಲೇ ಜೀವ ಬೆದರಿಕೆ

ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ , ಶುಕ್ರವಾರ, 9 ನವೆಂಬರ್ 2018 (07:12 IST)
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ ರಾಜಣ್ಣ ಅವರಿಗೆ  ಮತ ನೀಡಿದ ಮತದಾರನೇ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ಮಾಜಿ ಶಾಸಕ ರಾಜಣ್ಣ ಅವರಿಗೆ ನವೆಂಬರ್ 2 ಹಾಗೂ 3 ರಂದು ಕರೆ ಮಾಡಿರುವ ಆ ವ್ಯಕ್ತಿ ತನ್ನ ಹೆಸರಾಗಲಿ, ಊರಾಗಲಿ ಹೇಳದೆ ತಾನು ನಿನಗೆ ಮತ ನೀಡಿದ ಮತದಾರ ಎಂದು ಹೇಳಿರುವ ಆತ ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ಏಕವಚನದಲ್ಲಿ ನಿಂದನೆ ಮಾಡಿದ್ದಾನೆ.


ಕಾಂಗ್ರೆಸ್ ಪಕ್ಷದವರಿಂದ ಹಣ ತಿಂದು ಜೆಡಿಎಸ್ ಪಕ್ಷವನ್ನ ಹಾಳು ಮಾಡಿಬಿಟ್ಟೆ ಎಂದು ಕಿಡಿಕಾರಿದ್ದಾನೆ. ಅಲ್ಲದೇ ಏನಾದರೂ ಪೊಲೀಸರಿಗೆ ದೂರು ನೀಡಿದರೆ ಹಾಡಹಗಲೇ ನಿನ್ನ ಮನೆಗೆ ಬಂದು ತಲೆ ಕಡಿಯುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಹೆಚ್ಚೆಂದರೆ ನೀನು ನನ್ನನ್ನು ಜೈಲಿಗೆ ಕಳುಹಿಸುತ್ತೀಯಾ ಅಷ್ಟೆ ತಾನೇ ಎಂದು ಹೇಳಿದ್ದಾನೆ.


ಈ ಕುರಿತು ರಾಜಣ್ಣ ಎಸ್ಪಿ ಕಾರ್ತಿಕ್‍ ರೆಡ್ಡಿ ಅವರನ್ನು ಭೇಟಿ ಮಾಡಿ ಅನಾಮಧೇಯ ಮೊಬೈಲ್ ಕರೆಯ ಆಡಿಯೋ ರೆಕಾರ್ಡ್ ನೀಡಿ, ಆತನ ವಿರುದ್ಧ ದೂರು ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ ಆಚರಣೆ ಹಿನ್ನಲೆ; ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ