Publish Date: Tue, 22 Aug 2017 (18:22 IST)
Updated Date: Tue, 22 Aug 2017 (18:24 IST)
ಲಿಂಗಾಯುತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವುದು ಸೂಕ್ತ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಲಿಂಗಾಯುತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಕೆಲವರು ಇಂತಹ ವರದಿಗಳನ್ನು ಅನಗತ್ಯವಾಗಿ ಹರಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷ ಲಿಂಗಾಯುತ ವಿರೋಧಿ ಎಂದು ಹೇಳುವವರು ಮುಂದೆ ಅನುಭವಿಸಲಿದ್ದಾರೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
ಜೆಡಿಎಸ್ ಪಕ್ಷ ಜಾತ್ಯಾತೀತವಾದುದ್ದು ಎಲ್ಲಾ ಜಾತಿ ಧರ್ಮಗಳನ್ನು ಗೌರವಿಸುತ್ತದೆ. ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಪಕ್ಷ ಬದ್ಧವಾಗಿದೆ. ಮುಂಬರುವ ಚುನಾವಣೆಯ ನಂತರ ಜೆಡಿಎಸ್ ಫಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.