Select Your Language

Notifications

webdunia
webdunia
webdunia
webdunia

ಲಿಂಗಾಯತರು ಬಿಜೆಪಿಗೇ ಮತ ಹಾಕಿ ಗೆಲ್ಲಿಸಿ : ಯಡಿಯೂರಪ್ಪ

ಲಿಂಗಾಯತರು ಬಿಜೆಪಿಗೇ ಮತ ಹಾಕಿ ಗೆಲ್ಲಿಸಿ : ಯಡಿಯೂರಪ್ಪ
ಶಿವಮೊಗ್ಗ , ಭಾನುವಾರ, 26 ಫೆಬ್ರವರಿ 2023 (11:46 IST)
ಶಿವಮೊಗ್ಗ : 2ಎ ಮೀಸಲಾತಿ ಹೋರಾಟದಲ್ಲಿ ಪಂಚಮಸಾಲಿ, ಬಿಎಸ್ವೈ ನಿವೃತ್ತಿಯಿಂದ ವೀರಶೈವ ಲಿಂಗಾಯತರ ಮತ ಬಿಜೆಪಿಗೆ ಕೈತಪ್ಪಲಿದೆ ಎಂಬ ಆತಂಕ, ರಣತಂತ್ರದ ಮಧ್ಯೆ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದು, ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
 
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ 80 ವರ್ಷವಾದ ಹಿನ್ನೆಲೆಯಲ್ಲಿ ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ತೀರ್ಮಾನ ಮಾಡಿದ್ದೇನೆ. ಇದು ಹೊರತುಪಡಿಸಿದರೆ, ಬೇರೇನೂ ಕಾರಣವಿಲ್ಲ.

ನಾನು ಚುನಾವಣೆಗೆ ನಿಲ್ಲದೇ ಇರಬಹುದು. ಆದರೆ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಾದ್ಯಂತ ಸುತ್ತಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿಕೆ