Webdunia - Bharat's app for daily news and videos

Install App

ಲೋಡ್ ಲೋಡ್ ಮೇವು ತಂದೋರಾರು: ಮಾದರಿಯಾದ ಜನರು

Webdunia
ಮಂಗಳವಾರ, 20 ಆಗಸ್ಟ್ 2019 (19:14 IST)
ಪ್ರವಾಹದಿಂದ ನಲುಗಿದ ಉತ್ತರ ಕರ್ನಾಟಕ ಭಾಗದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಿಗಡಾಯಿಸಿದೆ.

ಎಲ್ಲಾ ದಾನಿಗಳು ಜನರಿಗೆ ಆಹಾರ ಹಾಗೂ ದಿನನಿತ್ಯದ ವಸ್ತುಗಳನ್ನು ನೀಡುತ್ತಿದ್ದಾರೆ. ಆದರೆ ಅಲ್ಲಿನ ಜಾನುವಾರುಗಳು  ಆಹಾರವಿಲ್ಲದೆ ನಲುಗಿವೆ. ಈ ಜಾನುವಾರುಗಳಿಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮಸ್ಥರು 11 ಲೋಡ್ ಮೇವನ್ನು ಹೊತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳಿದ್ದಾರೆ.

ಪ್ರವಾಹದಿಂದ ಉತ್ತರ ಕರ್ನಾಟಕ ಭಾಗ ಸಂಪೂರ್ಣವಾಗಿ ನಲುಗಿದ್ದು, ಇಲ್ಲಿನ ಜನ ಊಟಕ್ಕೂ ಹರಸಾಹಸ ಪಡುವಂತಾಗಿದೆ. ಇನ್ನೂ ಇಲ್ಲಿನ ಜಮೀನು ಇನ್ನಿತರೆ ಮೇವು ಬೆಳೆಯುವ ಜಾಗಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ.  ಈ ಹಿನ್ನಲೆ ಜಾನುವಾರುಗಳಿಗೆ ಮೇವು ಸಿಗದಂತಾಗಿದ್ದು, ಮೇವಿಗೆ ಬೇಡಿಕೆ ಹೆಚ್ಚಿದೆ.

ಈ ಭಾಗದಲ್ಲಿ ಪ್ರವಾಹದಿಂದ ಜಾನುವಾರುಗಳಿಗೂ ಸಹ ಆಹಾರವಿಲ್ಲದಂತಾಗಿವೆ. ಈ ವಿಷಯವನ್ನರಿತ ಜಿಗಳಿ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರ ತಂಡ ಮೇವನ್ನು ಕಳುಹಿಸಲು ಮುಂದಾಗಿ ಮೂರು ದಿನಕ್ಕೆ ಬರೋಬ್ಬರಿ 11 ಲೋಡ್ ಹುಲ್ಲನ್ನು ಸಂಗ್ರಹಿಸಿದ್ದಾರೆ. ಪ್ರತಿ ರೈತರ ಮನೆಗೆ ತೆರಳಿದ ಯುವಕರ ಗುಂಪು ಮೇವನ್ನು ಸಂಗ್ರಹ ಮಾಡಿದೆ.

ಇನ್ನೂ ಈ ಯುವಕರ ತಂಡಕ್ಕೆ ರೈತರು, ಗ್ರಾಮಸ್ಥರು ಸಹಾಯಹಸ್ತ ನೀಡಿ ಮಾನವೀಯತೆ ಮೆರೆದಿದ್ದಾರೆ. ಮೇವು ತುಂಬಿದ್ದ 11 ಟ್ರ್ಯಾಕ್ಟರ್ ಗಳಿಗೆ ಬಾಳೆ ಕಂಬ ಕಟ್ಟಿ ಪೂಜೆ ಸಲ್ಲಿಸಿ ಬಳಿಕ ಉತ್ತರ ಕರ್ನಾಟಕದ ಬಾದಾಮಿ ತಾಲ್ಲೂಕಿನ ಶಿವಯೋಗಿ ಮಂದಿರ ಸೇರಿದಂತೆ ವಿವಿಧ ಹಳ್ಳಿಗಳಿಗೆ ಮೇವು ನೀಡಲು ಹೊರಟರು.

 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments