Webdunia - Bharat's app for daily news and videos

Install App

ರುದ್ರೇಶ ಕೊಲೆ ಹಿಂದೆ ಮುಸ್ಲಿಂ ಮುಖಂಡರ ಕೈವಾಡ?

Webdunia
ಶನಿವಾರ, 29 ಅಕ್ಟೋಬರ್ 2016 (18:32 IST)
ಬೆಂಗಳೂರು:  ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ಒಮ್ಮಿಂದೊಮ್ಮೆಲೆ ಟ್ವಿಸ್ಟ್ ಪಡೆದುಕೊಂಡಿದ್ದು, ಆತನ ಕೊಲೆಯ ಹಿಂದೆ ಕೆಲವು ಸ್ಥಳೀಯ ಮುಸ್ಲಿಂ ಮುಖಂಡರ ಕೈವಾಡವಿರುವುದು ಬಹಿರಂಗಗೊಂಡಿದೆ.
 
ಇಬ್ಬರು ಆರೋಪಿಗಳನ್ನು ವಶಪಡಿದುಕೊಂಡಿದ್ದ ಪೊಲೀಸರು  ವಿಚಾರಣೆಗೆ ಒಳಪಡಿಸಿದಾಗ ಈ ವಿಷಯ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಕೆಲವು ಸ್ಥಳೀಯ ಮುಸ್ಲಿಂ ಮುಖಂಡರು ರುದ್ರೇಶನ ಕೊಲೆಗೈಯ್ಯಲು ಆರೋಪಿಗಳಿಗೆ ಹಣಕಾಸಿನ ನೆರವು ಮಾಡಿ ಕೇರಳದಲ್ಲಿ ತರಬೇತಿ ಕೊಡಿಸಿದ್ದರು. ಅಲ್ಲಿಂದ ತರಬೇತಿ ಪಡೆದುಕೊಂಡ ಬಂದ ಆರೋಪಿಗಳು ನವರಾತ್ರಿ ಸಮಯ ನೋಡಿ ರುದ್ರೇಶರನ್ನು ಹತ್ಯೆಗೈಯ್ಟ್ರೈನಿಂಗ್ ಪಡೆಯೋಕೆ ಅವಕಾಶ ಮಾಡಿಕೊಟ್ಟಿದ್ದರು ಎನ್ನುವ ವಿಚಾರ ಈಗು ಪರಾರಿಯಾಗಿದ್ದರು ಎನ್ನುವುದು ಬಹಿರಂಗಗೊಂಡಿದೆ.
ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳು ಒಂದೊಂದೆ ವಿಚಾರವನ್ನು ಬಾಯ್ಬಿಡುತ್ತಿದ್ದಾರೆ. ಹತ್ಯೆಗೆ ಒಳಗಾದ ರುದ್ರೇಶ್ ಮುಂಬರುವ ಬೆಂಗಳುರು ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದರು. ಸಂಬಂಧಿಸಿ ತನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಇದು ಕೆಲವು ಸ್ಥಳೀಯ ಮುಖಂಡರಿಗೆ ಸಹಿಸಲಾಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ರುದ್ರೇಶರನ್ನು ಕೊಲೆ ಮಾಡುವ ಸಂಚು ರೂಪಿಸಿ, ಹಂತಕರ ಸಹಾಯದಿಂದ ಹತ್ಯೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
 
ಆರ್‍ಎಸ್‍ಎಸ್ ಕಾರ್ಯಕರ್ತರು ನವರಾತ್ರಿ ಹಿನ್ನೆಲೆಯಲ್ಲಿ ಅಕ್ಟೋಬರ್ 16 ರಂದು ಮುಂಜಾನೆ ಶಿವಾಜಿನಗರ, ಭಾರತೀನಗರ ಸುತ್ತಮುತ್ತಲ ರಸ್ತೆಗಳಲ್ಲಿ ಪಥಸಂಚಲನ ಮಾಡಿದ್ದರು. ಪಂಥಸಂಚಲನ ಮುಗಿದ ಬಳಿಕ ಸುಮಾರು 11.30ರ ವೇಳೆ ಬೆಳಗ್ಗೆ 11.30ರ ಸುಮಾರಿಗೆ ರುದ್ರೇಶ್ ಅವರು ಸ್ನೇಹಿತರಾದ ಜಯರಾಂ, ಕುಮಾರ್ ಹಾಗೂ ಹರೀಶ್ ಅವರ ಜತೆ ಕಾಮರಾಜ ರಸ್ತೆಯ ಬಿಇಒ ಕಚೇರಿ ಬಳಿ ಮಾತನಾಡುತ್ತ ನಿಂತಿದ್ದಾಗ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರುದ್ರೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌ ನಡುವಿನ ಸಂಘರ್ಷ: ಇರಾನ್‌ಗೆ ರಫ್ತಾಗದೆ ಭಾರತದಲ್ಲೇ ಉಳಿದ 1ಲಕ್ಷ ಟನ್ ಬಾಸ್ಮತಿ

ಕಾಂಗ್ರೆಸ್ ಪಕ್ಷದವರೇ ಛೀ ಥೂ ಎಂದು ಉಗಿದರೂ ಎಂಥಾ ಭಂಡ ಬಾಳು ಇವರದ್ದು: ಆರ್ ಅಶೋಕ್

ಇರಾನ್‌ಗೆ ದೊಡ್ಡ ಎಚ್ಚರಿಕೆ ನೀಡಿದ ಇಸ್ರೇಲ್‌, ಇರಾನ್ ಸರ್ಕಾರವೇ ಗುರಿ

ರಾಜು ಕಾಗೆಯೇ ಕಾಂಗ್ರೆಸ್ ನ ಭ್ರಷ್ಟಾಚಾರ ಬಯಲು ಮಾಡಿದ್ದಾರೆ: ಬಿವೈ ವಿಜಯೇಂದ್ರ

Video, ಶಾಸಕನ ಜತೆ ರೈಲು ಸೀಟು ವಿನಿಮಯ ಮಾಡಿಕೊಳ್ಳಲು ನಿರಾಕರಣೆ: ರಕ್ತಬರುವ ಹಾಗೇ ಹಿಗ್ಗಾಮುಗ್ಗಾ ಥಳಿಸಿದ ಗುಂಪು

ಮುಂದಿನ ಸುದ್ದಿ
Show comments