Webdunia - Bharat's app for daily news and videos

Install App

ಎಟಿಎಂನಲ್ಲಿ ಹಣವಿಲ್ಲ, ದಿನಸಿ ಅಂಗಡಿಯಲ್ಲಿ ಸಾಮಾನೇ ಇಲ್ಲ!

Webdunia
ಬುಧವಾರ, 1 ಏಪ್ರಿಲ್ 2020 (09:34 IST)
ಬೆಂಗಳೂರು: ಲಾಕ್ ಡೌನ್ ವೇಳೆ ಜನರು ಅಗತ್ಯ ವಸ್ತುಗಳಿಗೆ ಪರದಾಡುವ ಸ್ಥಿತಿ ಬರಲ್ಲ ಎಂದು ಸರ್ಕಾರವೇನೋ ಹೇಳಿದೆ. ಆದರೆ ಆ ರೀತಿ ನಡೆಯುತ್ತಿಲ್ಲ ಎನ್ನುವುದು ವಿಪರ್ಯಾಸ.


ಸರಕು ಲಾರಿಗಳೂ ಸಾಗಾಟ ನಿಲ್ಲಿಸಿದ್ದು, ಮಾರುಕಟ್ಟೆಗಳೂ ಬಂದ್ ಆಗಿವೆ. ಹೀಗಾಗಿ ಬೇಕಾದಂತಹ ಎಲ್ಲಾ ದಿನಸಿ ವಸ್ತುಗಳು ಅಂಗಡಿಗೆ ಬರುತ್ತಿಲ್ಲ. ಅಲ್ಲದೆ ಪ್ರಮಾಣವೂ ಕಡಿಮೆಯಾಗಿರುವುದರಿಂದ ಎಲ್ಲಾ ಅಂಗಡಿಗಳಲ್ಲೂ ಮೊದಲಿನಂತೆ ವಸ್ತುಗಳು ಲಭ್ಯವಿಲ್ಲ. ಹೀಗಾಗಿ ಜನ ಪರದಾಡಬೇಕಾಗುತ್ತಿದೆ.

ಇನ್ನು, ಎಟಿಎಂಗಳಲ್ಲೂ ಕಾಲ ಕಾಲಕ್ಕೆ ಹಣ ತುಂಬುವ ಕೆಲಸವಾಗುತ್ತಿಲ್ಲ. ಹೀಗಾಗಿ ಬೆಂಗಳೂರಿನಂತಹ ನಗರ ಪ್ರದೇಶದ ಕೆಲವು ಎಟಿಎಂಗಳಲ್ಲೇ ಹಣ ಖಾಲಿಯಾಗಿದೆ. ಇದರಿಂದಾಗಿ ದುಡ್ಡೂ ಇಲ್ಲ, ದಿನಸಿಯೂ ಇಲ್ಲ ಎಂದು ಜನರು ಪರದಾಡುವಂತಾಗಿದೆ.  ಜತೆಗೆ ಕೊರೋನಾ ಭಯದಿಂದಾಗಿ ಖಾಸಗಿ ವೈದ್ಯರು ತಮ್ಮ ಕ್ಲಿನಿಕ್ ಗಳನ್ನೂ ತೆರೆಯುತ್ತಿಲ್ಲ. ಕೆಲವು ಆಸ್ಪತ್ರೆಗಳು ಈಗ ಬರೋದೇ ಬೇಡ ಎಂದು ಬೋರ್ಡ್ ಹಾಕಿ ಕುಳಿತಿದ್ದಾರೆ. ಇದರಿಂದಾಗಿ ಕೊರೋನಾ ಹೊರತಾದ ಇತರ ರೋಗಿಗಳ ಪಾಡು ಕೇಳುವವರಿಲ್ಲದಾಗಿದೆ. ಹೀಗಾಗಿಯೇ ಜನರಿಗೆ ಲಾಕ್ ಡೌನ್ ಈಗೀಗ ಉಸಿರುಗಟ್ಟಿಸುವಂತೆ ಮಾಡುತ್ತಿದೆ. ಆದರೂ ಜೀವ ಉಳಿಸಿಕೊಳ್ಳಲು ಮನೆಯಲ್ಲೇ ಕೂರುವ ಪರಿಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments