Select Your Language

Notifications

webdunia
webdunia
webdunia
webdunia

ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?

ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?
ಕೊಪ್ಪಳ , ಶುಕ್ರವಾರ, 26 ಜೂನ್ 2020 (16:25 IST)
ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಸಿಎಂ ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ‌. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಯಿಂದ ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು, ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ‌ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ಬಗ್ಗೆ ವದಂತಿ: ಟ್ವಿಟರಿಗರು ಟ್ರೋಲ್ ಮಾಡಿದ್ದು ಹೀಗೆ!