Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲಿಕೆ : ಡಿಸಿ ಗಳಿಗೆ ಖಡಕ್ ಸೂಚನೆ

Webdunia
ಶನಿವಾರ, 25 ಏಪ್ರಿಲ್ 2020 (14:38 IST)
ಲಾಕ್ ಡೌನ್ ವಿನಾಯಿತಿ ಮೇ 3 ರಿಂದ ನೀಡುವುದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಬಹುದು.

ಕೋವಿಡ್ -19 ರೋಗ ನಿಯಂತ್ರಣಕ್ಕೆ ಬರುತ್ತಿದೆ ಎಂದು ಉದಾಸೀನತೆ ತೋರುವಂತಿಲ್ಲ. ಪ್ರತಿಯೊಬ್ಬರೂ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್‍ಭಾಸ್ಕರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು,  ಬೆಂಗಳೂರಿನಲ್ಲಿ ಕೇವಲ ಒಬ್ಬ ವ್ಯಕ್ತಿಯಿಂದ 24 ಜನರಿಗೆ ಕೊರೋನಾ ಸೋಂಕು ಹರಡಿದೆ. ಇದೇ ರೀತಿ ಮುಂದುವರೆದರೆ ಪ್ರಕರಣಗಳು ಹೆಚ್ಚಾಗುತ್ತವೆ. ಹಾಗಾಗಿ ಕೊರೋನಾ ಸೋಂಕಿತರೊಡನೆ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವುದು ಹಾಗೂ ಅವರ ಮೇಲೆ ನಿಗಾವಹಿಸುವುದಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ ಎಂದಿದ್ದಾರೆ.

ಲಾಕ್ ಡೌನ್ ಮುಗಿದ ನಂತರ ಹೊರ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತದೆ. ಹಾಗಾಗಿ ಅವರನ್ನೆಲ್ಲಾ ಕ್ವಾರಂಟೈನ್‍ನಲ್ಲಿ ಇಡಬೇಕಾಗುತ್ತದೆ. ಕ್ವ್ವಾರಂಟೈನ್ ವ್ಯಕ್ತಿಗಳ ಮೇಲೆ ನಿಗಾ ಹಾಗೂ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಲು ಜಿಯೋ ಫೆನ್ಸಿಂಗ್ ಅನ್ನು ಕಾಲ್ ಸೆಂಟರ್‍ಗಳಿಗೆ ಲಿಂಕ್ ಮಾಡಿ.

ಪ್ರಥಮ ಹಾಗೂ ದ್ವತೀಯ ಸಂಪರ್ಕ ಹೊಂದಿದವರು ಜಿಯೋ ಫೆನ್ಸಿಂಗ್ ದಾಟಿದ ಕೂಡಲೇ ಅವರಿಗೆ ಕರೆ ಹೋಗುವಂತೆ ವ್ಯವಸ್ಥೆ ಮಾಡಿ. ಈ ರೀತಿ ಮಾಡಿದರೆ ಸುಲಭವಾಗಿ ಕಾರ್ಯ ಸಾಧಿಸಬಹುದು ಎಂದರಲ್ಲದೇ ಈ ವ್ಯವಸ್ಥೆಯನ್ನು ಮುಂದಿನ ಮೂರು ದಿನಗಳಲ್ಲಿ ಹೆಚ್ಚು ಕೊರೋನಾ ಪ್ರಕರಣಗಳು ಇರುವ ಜಿಲ್ಲೆಗಳಲ್ಲಿ ಅಳವಡಿಸಿ ಎಂದು ಅವರು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments