ಬೀಗ ಹಾಕಿರುವ ಮನೆಗಳೇ ಕಳ್ಳರ ಟಾರ್ಗೆಟ್

Webdunia
ಸೋಮವಾರ, 4 ಜುಲೈ 2022 (19:59 IST)
ಬೀಗ ಮನೆಗಳಿಗೆ ಕನ್ನ ಹಾಕಿ ನಗ-ನಾಣ್ಯ ದೋಚುತ್ತಿದ್ದ ತಂದೆ-ಮಗ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದೆ. ಮೈಸೂರಿನ ಇಮ್ರಾನ್‌ ಅಲಿಯಾಸ್‌ ಚೋರ್‌ ಇಮ್ರಾನ್‌, ಆತನ ತಂದೆ ಏಜಾಜ್‌ ಖಾನ್‌ ಅಲಿಯಾಸ್‌ ದಾದಾಫೀರ್‌ ಹಾಗೂ ಸೈಯದ್‌ ಅಹಮದ್‌ ಬಂಧಿತರಾಗಿದ್ದು, ಆರೋಪಿಗಳಿಂದ .65 ಲಕ್ಷ ಮೌಲ್ಯದ 1.3 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ
 ಕೆಲ ದಿನಗಳಿಂದ ನಗರದಲ್ಲಿ ನಡೆದ ಮನೆಗಳ ಬಗ್ಗೆ ತನಿಖೆ ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಜಂಟಿ ಆಯುಕ್ತ (ಅಪರಾಧ) ರಮಣ್‌ ಗುಪ್ತಾ ತಿಳಿಸಿದ್ದಾರೆ.
 
ವೃತ್ತಿಪರ ಮನೆಗಳ್ಳರು ತಂದೆ - ಮಗ
 
ಮೈಸೂರಿನ ಏಜಾಜ್‌ ಖಾನ್‌ ವೃತ್ತಿಪರ ಕಳ್ಳನಾಗಿದ್ದು, ತನ್ನ ಮಗನ್ನು ಮನೆಗಳ್ಳತನಕ್ಕೆ ಆತ ಬಳಸಿಕೊಂಡಿದ್ದ. ಬಾಲ್ಯದಿಂದಲೇ ಪುತ್ರನಿಗೆ ಮನೆಗಳ್ಳತನ ಕೃತ್ಯ ಎಸಗುವ ಬಗ್ಗೆ ಹೇಳಿಕೊಟ್ಟಿದ್ದ ಏಜಾಜ್‌, 15 ವರ್ಷಗಳಿಂದ ಬೆಂಗಳೂರು ಹಾಗೂ ಮೈಸೂರು ಸೇರಿದಂತೆ ಇತೆರೆಡೆ ತಂದೆ-ಮಗ ಜೋಡಿಯಾಗಿ ಮನೆಗಳಿಗೆ ಕನ್ನ ಹಾಕಿದ್ದರು. ಇತ್ತೀಚಿಗೆ ಜೈಲಿನಲ್ಲಿ ಪರಿಚಯವಾದ ಸೈಯದ್‌ನನ್ನು ಸಹ ತಮ್ಮ ತಂಡಕ್ಕೆ ಅವರ ಸೇರಿಸಿಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.
 
ಅಪಾರ್ಟ್‌ಮೆಂಟ್‌ ಮತ್ತು ಐಷರಾಮಿ ಮನೆಗಳನ್ನೇ ಟಾರ್ಗೆಟ್‌ ಮಾಡಿ ಆರೋಪಿಗಳು ಕನ್ನ ಹಾಕುತ್ತಿದ್ದರು. ಜನ ವಸತಿ ಕಡೆ ಅಡ್ಡಾಡುತ್ತಿದ್ದ ಆರೋಪಿಗಳು, ಬೀಗ ಹಾಕಿ ಮನೆಗಳು ಹಾಗೂ ಅಪಾರ್ಚ್‌ಮೆಂಟ್‌ನಲ್ಲಿ ಕೆಲಸಗಾರ ಸೋಗಿನಲ್ಲಿ ಹೋಗಿ ಕಳ್ಳತನ ಮಾಡುತ್ತಿದ್ದ. ಬಳಿಕ ಕದ್ದ ವಸ್ತುಗಳನ್ನು ಅಡಮಾನವಿಟ್ಟು ಐಷರಾಮಿ ಜೀವನ ನಡೆಸುತ್ತಿದ್ದರು.
 
ಪ್ರತಿದಿನ ಒಂದೊಂದು ಐಷರಾಮಿ ಹೋಟೆಲ್‌ನಲ್ಲಿ ಆರೋಪಿಗಳು ವಾಸ್ತವ್ಯ ಹೂಡುತ್ತಿದ್ದರು. ಹಳೇ ಪ್ರಕರಣಗಳ ವಿಚಾರಣೆ ಗೈರಾದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯವು 50ಕ್ಕೂ ಹೆಚ್ಚು ಬಾರಿ ಸಮನ್ಸ್‌ ಮಾಡಿತ್ತು. ಈ ಸಲುವಾಗಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಗೋವಾಗಳಲ್ಲಿ ಆರೋಪಿಗಳಿಗೆ ಬೆನ್ನಹತ್ತಿ ಕೊನೆಗೆ ಮೈಸೂರು ಸೆರೆ ಹಿಡಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments