Webdunia - Bharat's app for daily news and videos

Install App

ಲೋಕಸಭಾ ಚುನಾವಣೆ ಹಿನ್ನೆಲೆ; ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಮದ್ಯ ವಶ

Webdunia
ಶನಿವಾರ, 2 ಮಾರ್ಚ್ 2019 (08:31 IST)
ಕಾರವಾರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಏಳು ಲಕ್ಷದ ಹದಿನೈದು ಸಾವಿರ ಮೌಲ್ಯದ 2,440 ಲೀಟರ್ ಗೋವಾ ಅಕ್ರಮ ಸರಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಹಳ್ಳಿ ಗ್ರಾಮದ ಮನೆಯೊಂದರಲ್ಲಿ  ಸಂಗ್ರಹಿಸಿಟ್ಟಿದ್ದು, ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದಾರೆ.


ಗುರುವಾರ ಮಧ್ಯರಾತ್ರಿ ವೇಳೆ ಕಾರವಾರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕರ ಆಪ್ತನಾಗಿದ್ದ ಶಿರವಾಡದ ದಿಲೀಪ್ ಮಹಾನಂದ ನಾಯ್ಕ, ಸುನಿಲ್ ಪಂಡಿತ್ ಹಾಗೂ ವಿಷ್ಣು ತಾಳೇಕರ್ ಎಂಬವರು ಬೆಳಗಾವಿಯ ನಕಲಿ ನೊಂದಣಿ ಹೊಂದಿದ್ದ ವಿಂಗರ್ ನಲ್ಲಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಸಿಬ್ಬಂದಿ ತಡೆದು ಪರಿಶೀಲಿಸಿದ್ದಾರೆ.


ಆಗ ಅಧಿಕಾರಿಗಳನ್ನು ಯಾಮಾರಿಸಿದ ಆರೋಪಿಗಳು ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮದಲ್ಲಿನ ಸೀತಾರಾಮ್ ಪ್ರಭಾಕರ್ ಚಿಂಚನಕರ್ ಎಂಬವರ ಮನೆಯೊಂದರ ಕಾಂಪೌಂಡ್ ನಲ್ಲಿ ಇಳಿಸಿ ಗಾಡಿಯೊಂದಿಗೆ ಪರಾರಿಯಾಗಿದ್ದಾರೆ. ಆಗ ವಾಹನವನ್ನು ಹಿಂಬಾಲಿಸಿ ಬಂದ ಅಬಕಾರಿ ಅಧಿಕಾರಿಗಳು ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.


ಈ ಹಿನ್ನಲೆಯಲ್ಲಿ ಮದ್ಯ ದೊರೆತ ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮದಲ್ಲಿನ ಸೀತಾರಾಮ್ ಪ್ರಭಾಕರ್ ಚಿಂಚನಕರ್, ಶಿರವಾಡದ ದಿಲೀಪ್ ಮಹಾನಂದ ನಾಯ್ಕ, ಸುನಿಲ್ ಪಂಡಿತ್ ಮತ್ತು ವಿಷ್ಣು ತಾಳೇಕರ್ ಮೇಲೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾದವರಿಗಾಗಿ ಹುಡುಕಾಟ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments