Webdunia - Bharat's app for daily news and videos

Install App

ರಂಗೇರಿದ ಲೋಕಸಭೆ ಚುನಾವಣೆ: ಬಿಜೆಪಿಯಿಂದ ನೋ ಮೈಕ್, ನೋ ಚೇರ್ಸ್ ಪ್ರಚಾರಾಭಿಯಾನ!

Sampriya
ಗುರುವಾರ, 21 ಮಾರ್ಚ್ 2024 (10:10 IST)
ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಚುನಾವಣೆ  ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಸಣ್ಣಮಟ್ಟಿನ ಜನ ಸಮುದಾಯವನ್ನು ತಲುಪಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ನೋ ಮೈಕ್, ನೋ ಚೇರ್ಸ್ ಅಭಿಯಾನ ಹಾಕಿಕೊಂಡಿದೆ.

ತಳಮಟ್ಟದಲ್ಲಿ ಮತದಾರರನ್ನು ತಲುಪುವ ಉದ್ದೇಶದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಏಪ್ರಿಲ್ 5ರ ಒಳಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಸ್ತೆ ಬದಿಗಳಲ್ಲಿ, ಸಣ್ಣಪುಟ್ಟ ಹಳ್ಳಿಗಳ ಮರಗಳ ಅಡಿಯಲ್ಲಿ ಅಥವಾ ಮನೆಗಳಲ್ಲಿ ಈ ಅಭಿಯಾನದಡಿ ಚುನಾವಣಾ ಪ್ರಚಾರ ನಡೆಸಲಾಗುತ್ತದೆ. ಒಂದು ಬಾರಿಯ ಸಭೆಯ ವೇಳೆ ಸುಮಾರು ನೂರು ಜನರನ್ನು ತಲುಪುವ ಗುರಿ ಹೊಂದಲಾಗಿದೆ. ‌ಬೃಹತ್‌ ರ‍್ಯಾಲಿಗಳನ್ನು ನಡೆಸುವ ಬದಲು ಸಣ್ಣಪುಟ್ಟ ಸಭೆಗಳನ್ನು ನಡೆಸುವ ಮೂಲಕ ಜನರನ್ನು ತಲುಪುವುದು ಉತ್ತಮ ವಿಧಾನವಾಗಿದೆ. ಈ ಮೂಲಕ ಪ್ರತಿಯೊಬ್ಬರಿಗೂ ನಾವು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ. ಸ್ಥಳೀಯ ನಾಯಕರ ಸಹಕಾರದೊಂದಿಗೆ ಈ ಹೊಸ ಪ್ರಚಾರದ ಪರಿಕಲ್ಪನೆಯನ್ನು ನಾವು ಸಾಕಾರ ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಉಜ್ವಲ, ಜಲಜೀವನ್ ಮಿಷನ್ ಹಾಗೂ ಇತರ ಯೋಜನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಮತದಾರರ ಬಳಿ ಮತಯಾಚನೆ ಮಾಡಲು ನಿರ್ಧರಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments