Webdunia - Bharat's app for daily news and videos

Install App

RTO ಚೆಕ್​​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Webdunia
ಶನಿವಾರ, 22 ಅಕ್ಟೋಬರ್ 2022 (16:52 IST)
ACB ರದ್ದುಗೊಂಡ ನಂತರ ರಾಜ್ಯದಲ್ಲಿ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಲ್ಲೊಂದು ಇಲ್ಲೊಂದು ಬೇಟೆಯಾಡುತ್ತಲೇ ಇದೆ. ನಿನ್ನೆ ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಒಟ್ಟು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತು ಕೋಲಾರದಲ್ಲಿ ಬೇಟೆ ಆರಂಭಿಸಿದೆ. ವಾಹನ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ RTO ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿರುವ ಈ ಚೆಕ್​ಪೋಸ್ಟ್​ ಮೇಲೆ ದಾಳಿ ನಡೆಸಿದಾಗ ಹಣ ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ದಾಖಲೆಗಳ ಜೊತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ SP ಪವನ್ ನೆಜ್ಜೂರು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. RTO ಇನ್ಸ್​ಪೆಕ್ಟರ್ ಮಹಾದೇವಪ್ಪ ಮತ್ತು ಸಿಬ್ಬಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments