Select Your Language

Notifications

webdunia
webdunia
webdunia
webdunia

ಲೋಕಾ ಹೆಸರು ಬದಲಾವಣೆ ಇಲ್ಲ ಎಂದ ಸಿದ್ದರಾಮಯ್ಯ

ಲೋಕಾ ಹೆಸರು ಬದಲಾವಣೆ ಇಲ್ಲ ಎಂದ ಸಿದ್ದರಾಮಯ್ಯ
Bangalore , ಸೋಮವಾರ, 23 ಜನವರಿ 2017 (17:03 IST)
ಲೋಕಾಯುಕ್ತ ನೇಮಕ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ನ್ಯಾ. ವಿಶ್ವನಾಥ ಶೆಟ್ಟಿ ಅವರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ, ಇನ್ನು ಎರಡು ದಿನಗಳಲ್ಲಿ ಸ್ಪಷ್ಟನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
 
ಕೆಎಂಎಫ್ ಅಧ್ಯಕ್ಷರ ಬದಲಾವಣೆ ಕುರಿತು ಹೊಣೆಯನ್ನು ಸಚಿವರಾದ ಹೆಚ್ ಎಸ್ ಮಹದೇವಪ್ರಸಾದ್ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಅವರಿಗೆ ವಹಿಸಲಾಗಿತ್ತು. ಈಗ ಸಚಿವರಾದ ಹೆಚ್ ಎಸ್ ಮಹದೇವಪ್ರಸಾದ್ ನಮ್ಮೊಂದಿಗಿಲ್ಲ, ಸಚಿವ ಡಿ ಕೆ ಶಿವಕುಮಾರ್ ಅವರ ಜೊತೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಗಳು ಹೇಳಿದರು.
 
ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ಪಟ್ಟಣದಲ್ಲಿ 118ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಯವರು ಮಾತನಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪದೇ ಪದೇ ಶಿಸ್ತು ಕ್ರಮ ಎಂದು ಪದದ ಮರ್ಯಾದೆ ಕಳೆಯಬೇಡಿ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಲೇವಡಿ