Publish Date: Mon, 24 Apr 2023 (14:38 IST)
Updated Date: Mon, 24 Apr 2023 (15:45 IST)
ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಶಿವಮೊಗ್ಗದ ರಿಟೈರ್ಡ್ DFO ನಾಗರಾಜ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ವಿಭಾಗದ ಉಪಸಂರಕ್ಷಣಾಧಿಕಾರಿ ನಾಗರಾಜ್ಗೆ ಅಧಿಕಾರಿಗಳು ಶಾಕ್ ನೀಡಿದ್ದು, ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ನಾಗರಾಜ್ ನಿವಾಸದ ಮೇಲೆ ಹಾಗೂ ತೋಟದಮನೆ ಮೇಲೂ ದಾಳಿ ಮಾಡಿದ್ದಾರೆ.. ಅಕ್ರಮ ಹಣ ಹಾಗೂ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.. ಶಿಕಾರಿಪುರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.