Webdunia - Bharat's app for daily news and videos

Install App

ಲೋಕಾಯುಕ್ತರ ಪ್ರಕರಣ: ಸಹಿ ಸಂಗ್ರಹಕ್ಕೆ ಮುಂದಾದ ಬಿಜೆಪಿ-ಜೆಡಿಎಸ್

Webdunia
ಗುರುವಾರ, 2 ಜುಲೈ 2015 (17:03 IST)
ಲೋಕಾಯುಕ್ತರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದರೂ ಕೂಡ ರಾಜ್ಯದ ಮುಖ್ಯ ಲೋಕಾಯುಕ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ ಎಂಬ ಕಾರಣದಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ಸದಸ್ಯರುಗಳಿಂದ ಸಹಿ ಸಂಗ್ರಹಿಸಲು ಮುಂದಾಗಿದ್ದಾರೆ. 
 
ಮೂಲಗಳ ಪ್ರಕಾರ, ಈ ಸಹಿ ಸಂಗ್ರಹ ಅಭಿಯಾನಕ್ಕೆ ಇಂದಿನಿಂದಲೇ ಚಾಲನೆ ನೀಡುತ್ತಿದ್ದು, ಸಂಗ್ರಹಿಸಿದ ಬಳಿಕ ಸೋಮವಾರ ಸಭಾಧ್ಯಕ್ಷರಿಗೆ ಸಲ್ಲಿಸಲಾಗುತ್ತದೆ ಎನ್ನಲಾಗಿದೆ. 
 
ಈ ಬಗ್ಗೆ ವಿಧಾನ ಸಭಾ ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಸರ್ಕಾರಕ್ಕೆ ಲೋಕಾಯುಕ್ತರನ್ನು ಪದಚ್ಯುತಗೊಳಿಸುವ ಹಾಗೂ ಸಿಬಿಐಗೆ ವಹಿಸುವ ಎಲ್ಲಾ ಅವಕಾಶಗಳಿದ್ದರೂ ಕೂಡ ಸರ್ಕಾರ ಸಾಧ್ಯವಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಆದರೆ ಅವರ ನಡವಳಿಕೆ ಸರ್ಕಾರದ ಕೆಲ ವ್ಯಕ್ತಿಗಳೂ ಕೂಡ ಪ್ರಕಱಣದಲ್ಲಿರಬಹುದು. ಆದ್ದರಿಂದಲೇ ಈ ರೀತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆಱೋಪಿಸಿದ ಅವರು, ಸಹಿ ಸಂಗ್ರಹಿಸಿ ಸಭಾಪತಿಗಳಿಗೆ ಸಲ್ಲಿಸುತ್ತೇವೆ ಎಂದರು.  
 
ಇದೇ ವೇಳೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಕ್ಷ ಕುಮಾರಸ್ವಾಮಿ ಕೂಡ ಪ್ರತಿಕ್ರಿಯಿಸಿದ್ದು, ರಾಜ್ಯಾಂದ್ಯಂತ ವಕೀಲರು, ರಾಜಕಾರಣಿಗಳು ಸೇರಿದಂತೆ ಇತರೆ ಗಣ್ಯರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಭಟಿಸುತ್ತಿದ್ದರೂ ಕೂಡ ಆಡಳಿತ ಪಕ್ಷದವರು ಪ್ರಕರಣವನ್ನು ಮುಚ್ಚಿ ಹಾಕುವ ಯತ್ನದಲ್ಲಿದ್ದಾರೆ. ಅಲ್ಲದೆ ಲೋಕಾಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ. ಆದರೆ ಕಾನೂನು ವ್ಯಾಪ್ತಿಯಲ್ಲಿ ಎಲ್ಲಾ ಅವಕಾಶಗಳೂ ಇವೆ. ಆದರೂ ಅವರ ಇಂತಹ ವರ್ತನೆ ಪ್ರಕಱಣದಲ್ಲಿ ಅವರೂ ಕೂಡ ಶಾಮೀಲಾಗಿದ್ದಾರೇನೋ ಎಂಬ ಸಂಶಯ ಮೂಡಿಸುತ್ತಿದೆ. ಆದ್ದರಿಂದಲೇ ಪ್ರಕರಣವನ್ನು ಸಿಬಿಐಗೆ ವಹಿಸಲು ಹೆದರುತ್ತಿದ್ದಾರೆ ಎಂದು ಆರೋಪಿಸಿದರು. 
 
ಬಳಿಕ, ಮುಖ್ಯ ಲೋಕಾಯುಕ್ತರು ನೈತಿಕ ಹೊಣೆ ಹೊತ್ತು ಈ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು. ಆದರೆ ರಾಮೀನಾಮೆ ನೀಡಲ್ಲ ಎಂಬ ಅತ್ಯಂತ ಕೆಟ್ಟ ಸಂದೇಶವನ್ನು ಲೋಕಾಯುಕ್ತರು ನೀಡಿದ್ದಾರೆ ಎಂದ ಅವರು, ಈ ಸಹಿ ಸಂಗ್ರಹ ಅಭಿಯಾನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೇ ಅಲ್ಲದೆ ಕಾಂಗ್ರೆಸ್ ಸದಸ್ಯರನ್ನೂ ಕೂಡ ಕೇಳಿಕೊಳ್ಳಲಿದ್ದು, ತಮ್ಮಲ್ಲಿ ಆತ್ಮ ಸಾಕ್ಷಿ ಇದ್ದಲ್ಲಿ ಅಭಿಯಾನದಲ್ಲಿ ಪಾಲ್ಗೊಂಡು ಸಹಿ ಮಾಡಿ ಎಂದು ಮನವಿ ಮಾಡಲಿದ್ದೇವೆ ಎಂದರು.  
 
ಇನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರೂ ಕೂಡ ಪ್ರತಿಕ್ರಿಯಿಸಿದ್ದು, 
ಲೋಕಾಯುಕ್ತರೇ ಭ್ರಷ್ಟರಿಂದ ಲಂಚ ಸ್ವೀಕರಿಸಿರುವುದು ರಾಜ್ಯದ ಇತಿಹಾಸದಲ್ಲಿಯೇ ಮೊದಲು ಎಂದ ಅವರು, ಈ ಪ್ರಕಱಣದಲ್ಲಿ ಲೋಕಾಯುಕ್ತರೂ ಹಾಗೂ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂದು ಕೇಳಿಬರುತ್ತಿರುವ ಆರೋಪ ನಿಜವಾಗಿಯೂ ಹೇಯ. ಆದ್ದರಿಂದಲೇ ಅವರ ಪದಚ್ಯುತಿ ಹಾಗೂ ಪ್ರಕಱಣವನ್ನು ಸಿಬಿಐಗೆ ವಹಿಸಲು ಸಹಿ ಸಂಗ್ರಹಿಸಲಾಗುತ್ತಿದ್ದಾರೆ ಎಂದರು.  
 
ಏನಿದು ಪ್ರಕರಣ?: 
ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments