Select Your Language

Notifications

webdunia
webdunia
webdunia
webdunia

'ಲೋಕಾ' ಭ್ರಷ್ಟಾಚಾರ ಪ್ರಕರಣ: ಆರೋಪಿಗಳ ಕಸ್ಟಡಿ ಆಗಸ್ಟ್ 14ರ ವರೆಗೆ ವಿಸ್ತರಣೆ

'ಲೋಕಾ' ಭ್ರಷ್ಟಾಚಾರ ಪ್ರಕರಣ: ಆರೋಪಿಗಳ ಕಸ್ಟಡಿ ಆಗಸ್ಟ್ 14ರ ವರೆಗೆ ವಿಸ್ತರಣೆ
ಬೆಂಗಳೂರು , ಶುಕ್ರವಾರ, 31 ಜುಲೈ 2015 (12:35 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನದ ಅವಧಿ ಇಂದಿಗೆ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಆರೋಪಿ ಅಶೋಕ್ ಕುಮಾರ್‌ನನ್ನು ಮತ್ತೆ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿದ್ದು, ಇತರೆ ಇಬ್ಬರು ಆರೋಪಿಗಳಾದ ಶಂಕರೇಗೌಡ ಹಾಗೂ  ಶ್ರೀನಿವಾಸಗೌಡ ಅವರನ್ನು ಆಗಸ್ಟ್ 14ರ ವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ.  
 
ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಾದ ಶ್ರೀನಿವಾಸಗೌಡ, ಶಂಕರೇಗೌಡ ಹಾಗೂ ಅಶೋಕ್ ಕುಮಾರ್ ಅವರನ್ನು ಬಂಧನದ ಅವಧಿ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ನಗರದ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತೆ ತಮ್ಮ ವಶಕ್ಕೇ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಇಂದು ಅಶೋಕ್ ಕುಮಾರ್‌ನನ್ನು ಮತ್ತೆ ತನಿಖಾಧಿಕಾರಿಗಳ ವಶಕ್ಕೆ ನೀಡಿದೆ.  
 
ಈ ಹಿಂದೆ ಈ ಆರೋಪಿಗಳನ್ನು ಕೋರ್ಟ್ 10 ದಿನಗಳ ಕಾಲ ಎಸ್ಐಟಿ ತನಿಖಾಧಿಕಾರಿಗಳ ವಶಕ್ಕೆ ನೀಡಿತ್ತು. ಈ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಎಲ್ಲರನ್ನೂ ಕೂಡ ಕಳೆದ ಜುಲೈ 21ರಂದು ಬಂಧಿಸಿ 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ ಹಲವೆಡೆ ಡೀಲಿಂಗ್ ನಡೆಸಿದ್ದರು ಎಂಬ ಆರೋಪ ಹಿನ್ನೆಲೆಯಲ್ಲಿ ಹಲವು ರಹಸ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನೂ ನಡೆಸಿದ್ದರು. ಇಂದು ಮತ್ತೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದು, ಇನ್ನೂ ಹೆಚ್ಚಿನ ವಿಚಾರಣೆಗೊಳಪಡಿಸಲಿದ್ದಾರೆ. 

Share this Story:

Follow Webdunia kannada