Webdunia - Bharat's app for daily news and videos

Install App

ಲೋಕಯುಕ್ತ ದಾಳಿ-ಬ್ರೋಕರ್ , ಕಂಪ್ಯೂಟರ್ ಆಪರೇಟರ್ ಗಳ ಜೊತೆ ಅಧಿಕಾರಿಗಳು ಶಾಮೀಲು...!

Webdunia
ಶನಿವಾರ, 5 ನವೆಂಬರ್ 2022 (14:24 IST)
ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಹಂತ ಹಂತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಕೆಲ ಕಚೇರಿಗಳ ಮೇಲೆ ದಾಳಿ ನಡೆಸುತ್ತಿರುವ ಲೋಕಾಯುಕ್ತ, ಭ್ರಷ್ಟರನ್ನ ರೆಡ್ ಹ್ಯಾಂಡಾಗಿ ಹಿಡಿಯಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.ನಿರಂತರವಾಗಿ ಭ್ರಷ್ಟತೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. 
 
ಅವ್ಯಾಹತವಾಗಿ ನಡೆಯುತ್ತಿರುವ ಭ್ರಷ್ಟಾಚಾರದ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು ನೆನ್ನೆ 14 ಕಡೆ ಏಕಕಾಲದಲ್ಲಿ  ಸಬ್ ರಿಜಿಸ್ಟರ್ ಕಚೇರಿ ಮೇಲೆ ದಾಳಿ ನಡೆಸಿದಾಗ ಭ್ರಷ್ಟಾಚಾರದ ಸಾಕ್ಷಿಗೆ ಲಕ್ಷಾಂತರ ರೂಪಾಯಿಯನ್ನ ಲೋಕಾಯುಕ್ತ ಅಧಿಕಾರಿಗಳು ಸೀಝ್ ಮಾಡಿದ್ದಾರೆ.ನಾಗವಾರ ,ಬನಶಂಕರಿ ,ಕೋರಮಂಗಲ, ಬಾಣಸವಾಡಿ, ನಗರದ ಹೊರವಲಯದಲ್ಲಿರುವ ಆನೇಕಲ್ ,ಹೊಸಕೋಟೆ, ದೊಡ್ಡ ಬಳ್ಳಾಪುರ ಹಾಗೂ ಬನ್ನೇರುಘಟ್ಟ ಸೇರಿ 14 ಕಡೆ ದಾಳಿ ನಡೆಸಿ ಒಟ್ಟು 7.5 ಲಕ್ಷದಷ್ಟು ಲಂಚದ ಹಣವನ್ನ ವಶಕ್ಕೆ ಪಡೆಯಲಾಗಿದೆ.
 
 ಇನ್ನು ಗ್ರಾಮಾಂತರ ಸಬ್ ರಿಜಿಸ್ಟರ್ ಕಚೇರಿಯಲ್ಲಿಯೇ 2ಲಕ್ಷದ 64 ಸಾವಿರದ 920 ರೂಪಾಯಿ ಲಂಚದ ಹಣ ಸಿಕ್ಕಿದೆ. ಎಸಿಬಿ ಬಂದ ಬಳಿಕ ಸರ್ಕಾರಿ ಅಧಿಕಾರಿಗಳು ಯಾವ ಭಯವಿಲ್ಲದೆ ಭ್ರಷ್ಟತೆಯಲ್ಲಿ ತೊಡಗುತ್ತಿದ್ರು. ಎಸಿಬಿ  ತಮ್ಮ ಕಚೇರಿಗಳ ಮೇಲೆ ದಾಳಿ ನಡೆಸೋದಿಲ್ಲ ಎಂಬ ನಂಬಿಕೆಗಳಿದ್ವು. ಅದನ್ನ ಅಭ್ಯಾಸ ಮಾಡಿಕೊಂಡಿದ್ದ ಅಧಿಕಾರಿಗಳು ಲೋಕಾಯುಕ್ತದ ಪ್ರಭಾವ ತಿಳಿಯದೆ ಲಂಚಾವತಾರವನ್ನ ಮುಂದುವರೆಸಿದ್ರು. ಅಂತಹ ಇಲಾಖೆ ಮೇಲೆ ನಡೆದ ಹಠಾತ್ ದಾಳಿಯಿಂದ ನಿಜಕ್ಕೂ ಶಾಕ್ ಆಗಿದ್ದಾರೆ. ಇನ್ನು  ಚೈನ್ ಲಿಂಕ್ ನಂತೆ ಭ್ರಷ್ಟತೆ ಇದ್ದು, ಬ್ರೋಕರ್ , ಕಂಪ್ಯೂಟರ್ ಆಪರೇಟರ್ ಹಾಗು ಸಬ್ ರಿಜಿಸ್ಟರ್ ಆಫೀಸರ್ ಗಳ ಮಧ್ಯೆ ಲಕ್ಷಾಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿದೆ. ಕಮಿಷನ್ ರೂಪದಲ್ಲಿ ಕೂಡ ಬ್ರೋಕರ್ ಗಳು ಜನರಿಂದ ಹಣ ಸುಲಿಗೆ ಮಾಡಲಾಗ್ತಿದೆ.ಇನ್ನು ಈಗಾಗಲೇ ಸಿಕ್ಕಿಬಿದ್ದಿರುವ ಕೆಲ ಅಧಿಕಾರಿಗಳಿಗೆ ನೊಟೀಸ್ ನೀಡಿದ್ದು , ನೊಟೀಸ್ ಗೆ ಉತ್ತರಿಸದಿದ್ದರೆ ನೇರವಾಗಿ ಜೈಲುಪಾಲಾಗುವ ಸಾಧ್ಯತೆ ಇದೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments