Webdunia - Bharat's app for daily news and videos

Install App

ಗಂಡ ಪ್ರೆಂಚ್ ಫ್ರೈಸ್, ಮಾಂಸ ತಿನ್ನಲು ಬಿಡುತ್ತಿಲ್ಲವೆಂದು ಠಾಣೆ ಮೆಟ್ಟಿಲೇರಿದ ಪತ್ನಿಗೆ ಕೋರ್ಟ್ ಏನ್ ಹೇಳಿತು ನೋಡಿ

Sampriya
ಶನಿವಾರ, 24 ಆಗಸ್ಟ್ 2024 (16:16 IST)
Photo Courtesy X
ಬೆಂಗಳೂರು: ತನ್ನ ಗಂಡ ಬೇಕಾದ ಹಾಗೇ ಪ್ರೆಂಚ್ ಫ್ರೈಸ್, ನಾನ್‌ ವೆಜ್‌ ಊಟಗಳನ್ನು ತಿನ್ನಲು ಬಿಡುತ್ತಿಲ್ಲ ಎಂದು ಪತ್ನಿಯೊಬ್ಬಳು ದಾಖಲಿಸಿದ್ದ ಎಫ್‌ಐಅರ್‌ಗೆ ಹೈಕೋರ್ಟ್, ಇದೊಂದು ಕ್ಷುಲ್ಲಕ ಕಾರಣ ಎಂದು ತಡೆ ಆದೇಶ ಹೊರಡಿಸಿದೆ.

ಈ ಸಂಬಂಧ ಬೆಂಗಳೂರಿನ 36 ವರ್ಷದ (ಸದ್ಯ ಅಮೆರಿಕದ ಟೆಕ್ಸಾಸ್‌ನಲ್ಲಿ ಉದ್ಯೋಗಿ) ಪತಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಪತಿ ನೀಡಿದ ದೂರಿನಲ್ಲಿ ಏನಿದೆ: ಮದುವೆ ನಂತರ ಅವಲಂಬಿತ ವೀಸಾದಡಿ ಪತ್ನಿಯನ್ನು ಅಮೆರಿಕಕ್ಕೆ ಕರೆದುಕೊಂಡು ಹೋದೆ. ನಮಗೆ ಮಕ್ಕಳು ಇದ್ದಾರೆ. ನನ್ನ ಪತ್ನಿ  ಅತ್ಯಂತ ಕಠಿಣ ಸ್ವಭಾವದವಳಿದ್ದಾಳೆ. ನನಗೆ ಹೊತ್ತಿಗೆ ಸರಿಯಾಗಿ ಅಡುಗೆ ಮಾಡಿಕೊಡುವುದಿಲ್ಲ. ನಾನೇನಾದರು ಕೇಳಿದರೆ ನೀನೇನು ನನ್ನ ಅಡುಗೆ ಮಾಡಿ ಹಾಕುವುದಕ್ಕೆ ಮದುವೆಯಾಗಿದ್ದೀಯಾ ಎಂದು ಜೋರು ಮಾಡುತ್ತಾಳೆ ಎಂದು ದೂರಿದ್ದಾರೆ.

ಸದಾ ಮೊಬೈಲ್‌ನಲ್ಲಿರುವ ಆಕೆ ಪಾಕಿಸ್ತಾನದ ನಾಟಕ, ಸೀರಿಯಲ್‌ಗಳು, ಫೇಸ್‌ ಬುಕ್‌, ಇನ್‌ಸ್ಟಾಗ್ರಾಂಗಳ ವೀಕ್ಷಣೆಯಲ್ಲೇ ಮುಳುಗಿರುತ್ತಾಳೆ. ತನ್ನ ಸೋದರ ಸಂಬಂಧಿಗಳ ಜೊತೆ ರೀಲ್ಸ್‌ ಮಾಡುವ ಹುಚ್ಚು ಬೇರೆ ಇದೆ. ಇನ್ನೂ ಅಂಗಡಿಗೆ ಹೋದರೆ ಬೇಕಾಬಿಟ್ಟಿ ಹಣ್ಣು, ಸಾಮಾನುಗಳನ್ನು ತರುತ್ತಾಳೆ. ಆದರೆ ಅವು ಯಾವುದನ್ನು ಸರಿಯಾಗಿ ಬಳಸದೆ ಕಸದ ಬುಟ್ಟಿಗೆ ಎಸೆಯುತ್ತಾಳೆ. ಆಕೆ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು, ಆದ್ದರಿಂದ, ಆಕೆ ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಪತಿ ಅರ್ಜಿಯಲ್ಲಿ ಕೋರಿದ್ದಾರೆ.

ಅರ್ಜಿಯಲ್ಲಿ ಪತಿ, ಪತ್ನಿಯ ಸಣ್ಣ ಸಣ್ಣ ಸಂಗತಿಗಳನ್ನೂ ಪಟ್ಟಿ ಮಾಡಿ ಆಕ್ಷೇಪಿಸಿರುವುದು ಮತ್ತು ವಿಚಾರಣೆ ವೇಳೆ 'ಫ್ರೆಂಚ್‌ ಫ್ರೈಸ್‌ ತಿನ್ನಲು ಬಿಡುತ್ತಿಲ್ಲ' ಎಂಬ ಆಕ್ಷೇಪಣೆಯನ್ನು ಆಲಿಸಿದ ನ್ಯಾಯಮೂರ್ತಿಗಳು, 'ಇದೊಂದು ಕ್ಷುಲ್ಲಕ ವಿಚಾರ' ಎಂದು ಮೌಖಿಕವಾಗಿ ಹೇಳಿ ತಡೆ ಆದೇಶ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments