Select Your Language

Notifications

webdunia
webdunia
webdunia
webdunia

ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ: ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ಸಾವು

ಅಪಘಾತ
ಬೆಂಗಳೂರು , ಶನಿವಾರ, 29 ಏಪ್ರಿಲ್ 2017 (09:06 IST)
ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಯಕ್ತಿಯನ್ನ ಗೌರಿಬಿದನೂರಿನ ನಿವಾಸಿ 35 ವರ್ಷದ ಫಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೊಂಡೆಕೊಪ್ಪ ಸರ್ಕಲ್`ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನ ಗೌರಿಬಿದನೂರಿನ ನಿವಾಸಿ 35 ವರ್ಷದ ಫೋಟೋಗ್ರಾಫರ್ ರಮೇಶ್ ಎಂದು ಗುರ್ತಿಸಲಾಗಿದೆ. ನೆಲಮಂಗಲದ ಕಿತ್ತನಹಳ್ಳಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮತ್ತೊಬ್ಬ ಸ್ನೇಹಿತನ ಜೊತೆ ರಮೇಶ್ ಬೈಕ್`ನಲ್ಲಿ ವಾಪಸ್ಸಾಗುತ್ತಿದ್ದರು. ಈ ಸಂದರ್ಭ ಯಮಸ್ವರೂಪಿಯಾಗಿ ಬಂದ ಲಾರಿ ಬೈಕ್ ಮೇಲೆ ಹರಿದಿದೆ. ಹಿಂಬದಿ ಕುಳಿತಿದ್ದ ರಮೇಶ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುತ್ತಿದ್ದ ಸ್ನೇಹಿತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ..

ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಸಂಚಾರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟಾಯ್ಲೆಟ್ ಗೆ ಹೋಗಿದ್ದಕ್ಕೆ ಪ್ರಯಾಣಿಕನನ್ನು ಹೊರ ಹಾಕಿದ ವಿಮಾನ ಸಿಬ್ಬಂದಿ!