Webdunia - Bharat's app for daily news and videos

Install App

ಕೈತಪ್ಪಿದ ಟಿಕೆಟ್: ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್

Sampriya
ಬುಧವಾರ, 20 ಮಾರ್ಚ್ 2024 (17:31 IST)
Photo Courtesy Facebook
ಬೆಂಗಳೂರು: ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಅದಕ್ಕೆ ಮುಂಚೆ ಬಾಗಲಕೋಟೆ ಟಿಕೆಟ್‌ ವಿಚಾರಕ್ಕೆ ಬಂಡಾಯ ಭುಗಿಲೆದ್ದಿದೆ.

ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್‌ಗೆ ಟಿಕೆಟ್ ನೀಡಬಾರದೆಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನ ಒಂದು ಗುಂಪು ರಸ್ತೆಗಿಳಿದು, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆ ಕಾಂಗ್ರೆಸ್ ಟಿಕೆಟ್‌ ಸಂಬಂಧ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಮತ್ತು ವೀಣಾ ಕಾಶಪ್ಪನವರ್ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಟಿಕೆಟ್‌ ಸಂಯುಕ್ತಾ ಪಾಟೀಲ್ ಪಾಲಾಗಿದೆ. ಟಿಕೆಟ್‌ ಕೈತಪ್ಪಿದ್ದರಿಂದ ಬೇಸರಗೊಂಡ ವೀಣಾ ಅವರು ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮನೆ ಎದುರು ಕಣ್ಣೀರು ಸುರಿಸಿದ್ದಾರೆ.

"ನನಗೆ ಟಿಕೆಟ್‌ ನೀಡುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿರುವುದು ನನ್ನ ಜಿಲ್ಲೆಯ ಜನ ನನ್ನ ಮೇಲಿಟ್ಟಿರುವ, ಪ್ರೀತಿ, ಅಭಿಮಾನ ಎಂದು ಭಾವಿಸುತ್ತೇನೆ. ನನಗಿರುವುದೇ ಇದು ಕೊನೆ ಒಂದು ಅವಕಾಶ. ನನ್ನ ಜಿಲ್ಲೆಯ ಜನರು ನನ್ನನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಇದೊಂದು ಕೊನೆಯ ಅವಕಾಶ. ಇದನ್ನು ಇವರು ಈ ರೀತಿ ಮಾಡಿದ್ದಾರೆ ಅಂದರೆ ಒಬ್ಬ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ ಹಾಗೆ" ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.

ಅದಲ್ಲದೆ ಬಾಗಲಕೋಟೆಯಲ್ಲಿ ಅವರ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಟಿಕೆಟ್ ಕೈತಪ್ಪಿದ ಬಳಿಕ ಮಾತನಾಡಿದ ವೀಣಾ ಅವರು, ಗೆಲ್ಲುವ ವೇಳೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಅವಶ್ಯಕತೆಯಿಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments