Webdunia - Bharat's app for daily news and videos

Install App

ಲಾಟರಿ ಹಗರಣ: ಡಿಜಿಪಿ ಓಂಪ್ರಕಾಶ್, ಕೆಂಪಯ್ಯ ಸಿಬಿಐ ವಿಚಾರಣೆ ಅಂತ್ಯ

Webdunia
ಶುಕ್ರವಾರ, 5 ಆಗಸ್ಟ್ 2016 (18:34 IST)
ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯ ಅವರ ಸಿಬಿಐ ವಿಚಾರಣೆ ಅಂತ್ಯಗೊಂಡಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯನವರಿಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.
 
ನವದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ಇಂದು ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ಸಿಬಿಐ ವಿಚಾರಣೆ ಇದೀಗ ಅಂತ್ಯಗೊಂಡಿದೆ. 
 
ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಹೊರ ರಾಜ್ಯಗಳಲ್ಲಿ ಮುದ್ರಿಸಿ ಕರ್ನಾಟಕದಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ಇದ್ದರು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಸುಮ್ಮನಿದ್ದರು. ಇದಕ್ಕಾಗಿ ಪೊಲೀಸ್ ಪೊಲೀಸ್ ಇಲಾಖೆಗೆ ಕಪ್ಪು ಕಾಣಿಕೆ ಸಲ್ಲುತ್ತಿತ್ತು ಎಂದು ಆರೋಪ ಮಾಡಲಾಗಿತ್ತು. 
 
ಬಹುಕೋಟಿ ಒಂದಂಕಿ ಲಾಟರಿ ದಂಧೆ ರೂವಾರಿ ಪಾರಿ ರಾಜನ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯಕ್ತರಾದ ಅಲೋಕ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments