Webdunia - Bharat's app for daily news and videos

Install App

ಅದೃಷ್ಟದ ಬಗ್ಗೆ ನಂಬಿಕೆ ಇಲ್ಲ ಅಂದ್ರೆ ಈ ಸ್ಟೋರಿ ಓದಿ ...!!!!

Webdunia
ಮಂಗಳವಾರ, 26 ಜುಲೈ 2022 (19:32 IST)
ಕೇರಳದಲ್ಲಿ ಕುಟುಂಬವೊಂದು ಕಷ್ಟಗಳಿಂದ ನರಳುತ್ತಿತ್ತು. ಸಾಲದ ಶೂಲದಲ್ಲಿ ಸಿಕ್ಕಿಹಾಕಿಕೊಂಡ ಕುಟುಂಬ ಹೇಗಾದರೂ ಸರಿ ಸಾಲನ ಸುಳಿಯಿಂದ ತಪ್ಪಿಸಿಕೊಂಡು ಬದುಕಬೇಕೆಂದು ಸ್ವಂತ ಮನೆಯನ್ನೇ ಮಾರಾಟ ಮಾಡಲು ನಿರ್ಧಾರ ಮಾಡಿತ್ತು. ಆದರೆ ಅವರ ಪಾಲಿಗೆ ವಿಧಿ ಇನ್ನೂ ಚೆನ್ನಾಗಿರುವುದನ್ನೇ ಕಾಯ್ದಿರಿಸಿತ್ತು. ಪ್ರೀತಿಯ ಮನೆಯನ್ನು ಮಾರಾಟ ಮಾಡಿ ಅದು ಪರರ ಪಾಲಾಗಲು ಬರೀ 2 ಗಂಟೆ ಬಾಕಿ ಇತ್ತು. ಆದರೆ ಅಷ್ಟು ಹೊತ್ತಿಗೆ ಈ ಕುಟುಂಬಕ್ಕೆ ಬರೋಬ್ಬರಿ 1 ಕೋಟಿ ರೂಪಾಯಿಯ ಲಾಟರಿ ಹೊಡೆದಿದೆ.
 
 
ಇದು ಕೇಳುವುದಕ್ಕೆ ಅಚ್ಚರಿಯಾದರೂ ಕೇರಳದಲ್ಲಿ ನಡೆದ ನಿಜ ಘಟನೆ ಇದು. ಕೆಲವೊಮ್ಮೆ ದೇವರು ನಾವು ಬಯಸ್ಸಿದ್ದಂಕಿತಲೂ ಸ್ವಲ್ಪ ಉತ್ತಮವಾದುದನ್ನೇ ಕೊಡುತ್ತಾನೆ ಎಂದು ಹಿರಿಯರು ಹೇಳುವುದನ್ನು ಕೇಳಿರಬಹುದು. ಈ ಕುಟುಂಬದ ಪಾಲಿಗೆ ಈ ಮಾತು ಸತ್ಯವಾಗಿದೆ.
 
1 ಕೋಟಿ ಲಾಟರಿ ಬಹುಮಾನ
 
ಸಾಲದ ಸುಳಿಯಲ್ಲಿ ಸಿಲುಕಿದ್ದ ಕಾಸರಗೋಡಿನ ಪೇಂಟರ್‌ಗೆ ಮಂಜೇಶ್ವರದಲ್ಲಿ ತಾನು ಹೊಸದಾಗಿ ನಿರ್ಮಿಸಿದ ಮನೆಗೆ ಮಾರಾಟ ಮಾಡಲು ಟೋಕನ್ ಹಣ ಪಡೆಯುವ ಎರಡು ಗಂಟೆಗಳ ಮೊದಲು 1 ಕೋಟಿ ರೂಪಾಯಿ ಲಾಟರಿ ಬಹುಮಾನ ಲಭಿಸಿದೆ. ನಾನು ನಮ್ಮ ಮನೆಯನ್ನು ಉಳಿಸಬಲ್ಲೆ. ನನಗೆ ಈಗಲೂ ಇದನ್ನು ನಂಬಲಾಗುತ್ತಿಲ್ಲ' ಎಂದು ಮಂಜೇಶ್ವರದ ಪಾವೂರು ನಿವಾಸಿ ಮೊಹಮ್ಮದ್ ಬಾವ (50) ಹೇಳಿದರು
 
ಕಷ್ಟಪಟ್ಟು ಕಟ್ಟಿದ ಮನೆಯೇ ಕೈತಪ್ಪುತ್ತಿತ್ತು
 
ಭಾರೀ ಸಾಲದ ಸುಳಿಯಲ್ಲಿ ತತ್ತರಿಸಿರುವ ಬಾವ ಮತ್ತು ಅವರ ಪತ್ನಿ ಅಮಿನಾ (45) ಎಂಟು ತಿಂಗಳ ಹಿಂದೆ ನಿರ್ಮಿಸಿದ 2,000 ಚದರ ಅಡಿಯ ತಮ್ಮ ಮನೆಯನ್ನು ಬ್ಲಾಕ್‌ನಲ್ಲಿ ಇರಿಸಿದ್ದಾರೆ.
 
ಇಬ್ಬರು ಹೆಣ್ಮಕ್ಕಳೊಂದಿಗೆ ಬಾಡಿಗೆ ಮನೆಗೆ ಹೋದ ದಂಪತಿ
 
ಭಾನುವಾರ ಸಂಜೆ 5 ಗಂಟೆಗೆ, ಮನೆಯನ್ನು ಕೊಳ್ಳಲು ಒಪ್ಪಂದವನ್ನು ಮಾಡಿ ಟೋಕನ್ ಮೊತ್ತದೊಂದಿಗೆ ಮನೆಗೆ ಬರಲು ಒಪ್ಪಿಕೊಂಡಿತ್ತು. ನಮಗೆ 45 ಲಕ್ಷ ರೂಪಾಯಿ ಸಾಲ ಇರುವುದರಿಂದ ಮನೆಗೆ 45 ಲಕ್ಷ ರೂಪಾಯಿ ಬೇಕಿತ್ತು. ಆದರೆ ಬ್ರೋಕರ್ ಮತ್ತು ಪಕ್ಷ 40 ಲಕ್ಷ ರೂ ಎಂದಿದ್ದರು. ಆದರೆ ದಂಪತಿ ಯಾವುದೇ ಬೆಲೆಗೆ ಆ ರಾತ್ರಿ ಮನೆ ಬಿಡಲು ಒಪ್ಪಿಕೊಂಡರು. ಅವರ ಇಬ್ಬರು ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಗೆ ತೆರಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments