Webdunia - Bharat's app for daily news and videos

Install App

ಲಾಟರಿ ಹಗರಣ: 6 ಮಂದಿ ಪೊಲೀಸ್ ಅಧಿಕಾರಿಗಳ ವಿಚಾರಣೆ ಇಂದು

Webdunia
ಸೋಮವಾರ, 25 ಮೇ 2015 (11:21 IST)
ಲಾಟರಿ ಹಗರಣ ಸಂಬಂಧ ರಾಜ್ಯದ ಸಿಐಡಿ ಅಧಿಕಾರಿಗಳು ಮಧ್ಯಂತರ ವರದಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೆ ತನಿಖೆಯು ಚುರುಕುಗೊಂಡಿದ್ದು, ಇಂದು ಪೊಲೀಸ್ ಇಲಾಖೆಯಲ್ಲಿನ ಆರು ಮಂದಿ ಉನ್ನತಾಧಿಕಾರಿಗಳು ವಿಚಾರಣೆಗೊಳಪಡಲಿದ್ದಾರೆ ಎನ್ನಲಾಗಿದೆ.  
 
ಮೂಲಗಳ ಪ್ರಕಾರ, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿಜಿಪಿ, ಎಡಿಜಿಪಿ ಸೇರಿದಂತೆ ಉನ್ನತ ಹುದ್ದೆಗಳನ್ನು ನಿಭಾಯಿಸುತ್ತಿರುವ ಆರು ಮಂದಿ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಇಂದು ವಿಚಾರಣೆ ನಡೆಸಲಾಗುತ್ತದೆ ಎನ್ನಲಾಗಿದೆ. ಆದರೆ ಅಧಿಕಾರಿಗಳ ವಿಳಾಸವನ್ನು ಬಹಿರಂಗಗೊಳಿಸಿಲ್ಲ.        
 
ಇನ್ನು ಶನಿವಾರ ಅಧಿಕಾರದಿಂದ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನೂ ಕೂಡ ಇಂದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇವರನ್ನು ನಿನ್ನೆ 9 ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣ ಸಂಬಂಧ ಸರ್ಕಾರವು ಅಲೋಕ್ ಕುಮಾರ್ ಹಾಗೂ ಎಸ್‌ಪಿ ಧರಣೇಶ್ ಎಂಬ ಇಬ್ಬರು ಅಧಿಕಾರಿಗಳನ್ನು ಈಗಾಗಲೇ ಅಮಾನತುಗೊಳಿಸಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ವರದಿಯಲ್ಲಿ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 35 ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಚುರುಕುಗೊಳಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments