Webdunia - Bharat's app for daily news and videos

Install App

ಲಾಟರಿ ಪ್ರಕರಣದ ಕಿಂಗ್‌ಪಿನ್ ರಾಜನ್ ಬೆಂಗಳೂರಿಗೆ ಶಿಫ್ಟ್

Webdunia
ಸೋಮವಾರ, 25 ಮೇ 2015 (18:00 IST)
ಒಂದಂಕಿ ಲಾಟರಿ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಾರಿರಾಜನ್‌ನನ್ನು ಸರ್ಕಾರವು ನಗರದ ಉಪಕಾರಾಗೃಹದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದ್ದು, ಕರೆ ತರಲಾಗಗುತ್ತಿದೆ. 
 
ನಾಲ್ವರು ಪೇದೆ ಹಾಗೂ ಓರ್ವ ಎಸ್‌ಐ ನೇತೃತ್ವದ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಇನ್ನು ಮುಂದೆ ನಗರದ ಅಗ್ರಹಾರ ಜೈಲಿನಲ್ಲಿಯೇ ಉಳಿದುಕೊಳ್ಳಲಿದ್ದಾನೆ ಎನ್ನಲಾಗಿದೆ. 
 
ಪ್ರಕರಣವೇನು ?
ಲಾಟರಿ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಆಗಿರುವ ಈತನನ್ನು ಬಂಧಿಸಿ ಕೋಲಾರದ ಜೈಲಿನಲ್ಲಿಡಲಾಗಿತ್ತು. ಆದರೆ ಎದೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಈತನನ್ನು ಕಳೆದ ಎರಡು ದಿನಗಳ ಹಿಂದೆ ಬಂಗಾರಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ ಜೈಲರ್ ಗಳು ವೈದ್ಯರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದಕ್ಕೆ ನ್ಯಾಯಾಲಯವೂ ಕೂಡ ಅನುಮತಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಆತನ್ನು ಅಗ್ರಹಾರ ಜೈಲಿಗೆ ಕರೆತರಲಾಗುತ್ತಿದ್ದು, ಚಿಕಿತ್ಸೆ ಅಗತ್ಯವೆನಿಸಿದಲ್ಲಿ ಇಲ್ಲಿಯೇ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಲಾಟರಿ ಹಗರಣದಲ್ಲಿ ಮುಖ್ಯ ಆರೋಪಿಯಾಗಿದ್ದು, ಬಹುಕೋಟಿ ಅವ್ಯವಹಾರ ನಡೆಸಿದ್ದಾನೆ ಎಂಬ ಆರೋಪ ಹಿನ್ನೆಲೆಯಲ್ಲಿ ಈತನನ್ನು ಮೇ 16ರಂದು ಬಂಧಿಸಲಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments