Webdunia - Bharat's app for daily news and videos

Install App

ಯುವಕ ಯುವತಿ ಪ್ರೇಮ ಪ್ರಕರಣ: ಎರಡು ಸಮುದಾಯಗಳ ಮಧ್ಯ ಘರ್ಷಣೆ

Webdunia
ಮಂಗಳವಾರ, 18 ಸೆಪ್ಟಂಬರ್ 2018 (17:02 IST)
ಯುವಕ ಯುವತಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ಮಧ್ಯ ಘರ್ಷಣೆ ನಡೆದಿದೆ.

ದೂರು ನೀಡಲು ಬಂದ ಯುವಕನ ಮೇಲೆ  ಪಿ.ಎಸ್.ಐ‌ ಸೇರಿದಂತೆ ಹಾಗೂ ಇಬ್ಬರು ಪೊಲೀಸ್ ಪೇದೆಗಳಿಂದ ಹಲ್ಲೆ ನಡೆದ ಆರೋಪ ಕೇಳಿಬಂದಿದೆ. ‌ 
ಯುವಕನನ್ನ ಹಿಗ್ಗಾ ಮುಗ್ಗಾ  ಪಿ.ಎಸ್.ಐ ಚಂದ್ರು ಹೆರಕಲ್ ಮತ್ತು ಪೇದೆಗಳು ಥಳಿಸಿದ್ದಾರೆ. ಘಟನೆಯಲ್ಲಿ ಪಾಂಡು ಮೈಲಾರ ಎಂಬ ಯುವಕನ ಕಾಲು, ತಲೆ, ಕೈಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಯುವಕನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಯುವಕನ ಸಂಬಂಧಿಕರ ಮೇಲೂ ಪೊಲೀಸರಿಂದ ಹಲ್ಲೆ ನಡೆದ ಆರೋಪ ಕೇಳಿಬಂದಿದೆ. ಹನುಮಪ್ಪ ದನಾಕಾಯೋರ, ಬಸಪ್ಪ ಹನುಮಪ್ಪ ಮೈಲಾರ, ಸುರೇಶ್ ಮೈಲಾರ, ದೇವರಾಜ ಮೈಲಾರ, ಭೀಮಪ್ಪ ದನಾಕಾಯೋರ ಎಂಬುವರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಬಾದಾಮಿ ತಾಲೂಕಿನ ಚಿಂಚಲಕಟ್ಟಿ ಗ್ರಾಮದವರಾಗಿದ್ದಾರೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಆಗ ಪ್ರಕರಣ ಕೆರೂರು  ಪೊಲೀಸ್ ಠಾಣೆ  ಮಟ್ಟಿಲೇರಿತ್ತು. ಒಂದು ಗುಂಪಿನ ಪರವಾಗಿ ನಿಂತು ಪಿ.ಎಸ್.ಐ ಹೆರಕಲ್ ಯುವಕ ಹಾಗೂ ಆತನ ಕಡೆಯವರಿಗೆ ಥಳಿಸಿರುವುದಾಗಿ ಆರೋಪಿಸಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments