Webdunia - Bharat's app for daily news and videos

Install App

ಪ್ರಿಯಕರನ ಸಾವಿನಿಂದ ನೊಂದ ಯುವತಿ ಆತ್ಮಹತ್ಯೆ

Webdunia
ಭಾನುವಾರ, 15 ಮೇ 2022 (16:35 IST)
ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಮಸ್ಕಲ‍್ ಗ್ರಾಮದಲ್ಲಿ ನಡೆದಿದೆ.
ಧನುಷ್ ಮತ್ತು ಸುಷ್ಮಾ ಕಳೆದೆರಡು ವರ್ಷಗಳಿಂದ ಪ್ರೀತಿಸಿದ್ದು, ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸುಷ್ಮಾ ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.
ತುಮಕೂರಿನ ಮಸ್ಕಲ್ ಗ್ರಾಮದ ಧನುಷ್ ಮೇ 11 ರಂದು ನೆಲಮಂಗಳ ಕುಲಾನಹಳ್ಳಿ ಬಳಿ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅರೆಹಳ್ಳಿ ಗ್ರಾಮದ ಸುಷ್ಮಾ ಈ ಸುದ್ದಿ ಕೇಳಿ ಆಘಾತಗೊಂಡಿದ್ದು, ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು.
ಧನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದ ಸುಷ್ಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.  ತಕ್ಷಣ ಕುಟುಂಬಸ್ಥರು ಸುಷ್ಮಾಳನ್ನು ನಾಲ್ಕೈದು ಆಸ್ಪತ್ರೆಗಳಿಗೆ ಕರೆದುಕೊಂಡು ಓಡಾಡಿದರೂ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಸುದ್ದಿ
Show comments