Webdunia - Bharat's app for daily news and videos

Install App

ಗಗನಸಖಿಯನ್ನು ತಳ್ಳಿಕೊಂದ ಪ್ರಿಯಕರ

Webdunia
ಬುಧವಾರ, 15 ಮಾರ್ಚ್ 2023 (17:13 IST)
ಬೆಂಗಳೂರು ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ.. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು ಅರ್ಚನಾಳ ಪ್ರಿಯಕರ ಆದೇಶ್​ ವಿರುದ್ಧ IPC 302 ಅಡಿಯಲ್ಲಿ FIR ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಹಿಮಾಚಲ ಮೂಲದ ಅರ್ಚನಾ ಹಾಗೂ ಕೇರಳ ಮೂಲದ ಆದೇಶ್​ ಡೇಟಿಂಗ್​ ಅ್ಯಪ್​ನಲ್ಲಿ ಪರಿಚಿತರಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಏರ್​ಲೈನ್ಸ್​​ನಲ್ಲಿ ಗಗನಸಖೆಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದ್ರೆ, ಮಾರ್ಚ್​ 11ರಂದು ಅರ್ಚನಾ ಆದೇಶ ತಂಗಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು. ಬಳಿಕ ಆದೇಶ್​, ನಶೆಯಲ್ಲಿ ಬಿಲ್ಡಿಂಗ್​​​​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ಹೇಳಿದ್ದ. ಅಲ್ಲದೇ ಪೊಲೀಸರಿಗೂ ಇದೇ ಹೇಳಿದ್ದ. ಆದ್ರೆ, ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಾಗಿ ಬಿದ್ದಿರುವುದಲ್ಲ. ಆದೇಶ್​ ಆಕೆಯನ್ನು ಮೇಲಿಂದ ತಳ್ಳಿದ್ದಾನೆ ಎಂದು ದೂರು ನೀಡಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments