Webdunia - Bharat's app for daily news and videos

Install App

ಪ್ರಿಯಕರನೊಂದಿಗೆ ಲವ್ವಿ ಡವ್ವಿ! : ಪತಿ ಏನ್ ಮಾಡ್ದ ಗೊತ್ತ?

Webdunia
ಭಾನುವಾರ, 23 ಜನವರಿ 2022 (11:15 IST)
ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲು ಗ್ರಾಮದಲ್ಲಿ 6 ವರ್ಷದ ಮಗುವನ್ನು ಕೊಂದು ವ್ಯಕ್ತಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ತಿರುವು ಸಿಕ್ಕಿದ್ದು, ಪತ್ನಿಯ ಅಕ್ರಮ ಸಂಬಂಧವೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

 
ಜ.13 ರಂದು ಪಿಟ್ಟೆಕೊಪ್ಪಲು ಗ್ರಾಮದ ಗಂಗಾಧರ್ ತನ್ನ ಮಗ ಜಶ್ವಿತ್ (6) ಜೊತೆಗೆ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನ ಪತ್ನಿ ಸಿಂಧು, ನಂಜುಂಡೇಗೌಡ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಂಜುಂಡೇಗೌಡನಿಗೆ ಸಿಂಧು ಅಕ್ಕನ ಮಗಳಾಗಬೇಕು. ಈ ವಿಷಯವನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಗಂಗಾಧರ್ ಎಳೆ ಎಳೆಯಾಗಿ ತಿಳಿಸಿದ್ದಾನೆ.

ಗಂಗಾಧರ್ ವೀಡಿಯೋದಲ್ಲಿ ತನ್ನ ಹೆಂಡತಿ ಸಿಂಧುವಿನ ಅಕ್ರಮ ಸಂಬಂಧ ಹಾಗೂ ಆಕೆ ನೀಡುತ್ತಿದ್ದ ಕಿರುಕುಳವನ್ನು ಹೇಳಿಕೊಂಡಿದ್ದಾನೆ. 8 ವರ್ಷಗಳ ದಾಂಪತ್ಯ ಜೀವನದಲ್ಲಿ ಕಳೆದೆರಡು ವರ್ಷದಿಂದ ಬಿರುಕು ಮೂಡಿತ್ತು ಎಂದು ಗಂಗಾಧರ್ ಹೇಳಿದ್ದಾನೆ. ನಂಜುಂಡೇಗೌಡನ ಮೋಹಕ್ಕೆ ಬಿದ್ದು ಪತಿ, ಮಗು ಬಗೆಗಿನ ಕಾಳಜಿಯನ್ನು ಸಿಂಧು ಮರೆತಿದ್ದಳು. ಪ್ರತಿನಿತ್ಯ ನಂಜುಂಡೇಗೌಡನ ಜೊತೆ ಮಾತುಕತೆಯಲ್ಲೇ ಸಿಂಧು ತೊಡಗಿದ್ದಳು.

ಯಾರೂ ಇಲ್ಲದ ವೇಳೆ ಗಂಗಾಧರ್ ಮನೆಗೆ ನಂಜುಂಡೇಗೌಡ ಬಂದು ಸಿಂಧು ಜೊತೆ ಕಾಲ ಕಳೆದು ಹೋಗುತ್ತಿದ್ದ. ಸಿಂಧು ಸದಾ ಫೋನ್ನಲ್ಲಿ ಬ್ಯುಸಿಯಾಗಿ ಇರುತ್ತಿದ್ದಳು. ನಂಜುಂಡೇಗೌಡ ಜೊತೆ ಸಿಂಧು ವೀಡಿಯೋ ಕಾಲ್ ಮಾಡುತ್ತಿದ್ದಳು. ಇದನ್ನು ಕಂಡ ಪತಿ ಗಂಗಾಧರ್ ಪತ್ನಿ ಸಿಂಧು ವರ್ತನೆಯನ್ನು ಪ್ರಶ್ನಿಸಿದ ವೇಳೆ ಸಿಂಧು ಮತ್ತು ನಂಜುಂಡೇಗೌಡ ಬೆದರಿಕೆ ಹಾಕಿದ್ದರು.

ಆಸ್ತಿ ಭಾಗ ಮಾಡಿ, ಹೆಂಡತಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಠಾಣೆಗೆ ದೂರು ನೀಡುತ್ತೇವೆ. ಇಲ್ಲ ನಿನ್ನ ಮತ್ತು ಮಗನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು.

ಪತ್ನಿ ಹಾಗೂ ಪ್ರಿಯಕರನ ನಿರಂತರ ಕಿರುಕುಳಕ್ಕೆ ಬೇಸತ್ತು ಹಾಗೂ ಮರ್ಯಾದೆಗೆ ಅಂಜಿ 6 ವರ್ಷದ ಮಗನೊಂದಿಗೆ ಗಂಗಾಧರ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದ್ದಾರೆ. ಅಂದು ನಿದ್ರಾವಸ್ತೆಯಲ್ಲಿದ್ದ ತನ್ನ ಮಗನ ಮುಖಕ್ಕೆ ಬಟ್ಟೆ ಕಟ್ಟಿ ಗಂಗಾಧರ್ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments