Select Your Language

Notifications

webdunia
webdunia
webdunia
webdunia

ಜಾರಕಿಹೋಳಿಗೆ ಸಣ್ಣ ಕೈಗಾರಿಕೆ ಖಾತೆ ಹಂಚಿಕೆ: ಸಂಜೆ ಅಧಿಕೃತ ಪ್ರಕಟಣೆ ಸಾಧ್ಯತೆ

ಜಾರಕಿಹೋಳಿಗೆ ಸಣ್ಣ ಕೈಗಾರಿಕೆ ಖಾತೆ ಹಂಚಿಕೆ: ಸಂಜೆ ಅಧಿಕೃತ ಪ್ರಕಟಣೆ ಸಾಧ್ಯತೆ
ಬೆಂಗಳೂರು , ಶುಕ್ರವಾರ, 30 ಜನವರಿ 2015 (13:54 IST)
ಅಬಕಾರಿ ಸಚಿವ ಸತೀಶ್ ಜಾರಕಿಹೋಳಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಯೋಗ ನಿನ್ನೆ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚಿಸಿದ್ದ ಹಿನ್ನೆಲೆಯಲ್ಲಿ ಜಾರಕಿಹೋಳಿ ಅವರಿಗೆ ಹೆಚ್ಚುವರಿಯಾರಿಯಾಗಿ ಮತ್ತೊಂದು ಖಾತೆಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಸಿದ್ದರಿದ್ದು, ಇಂದು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 
 
ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಚರ್ಚೆಯಲ್ಲಿ ಮತ್ತೊಂದು ಖಾತೆಯನ್ನು ನೀಡುವ ಭರವಸೆ ನೀಡಿದ್ದರು ಎನ್ನಲಾಗಿದ್ದು, ಪ್ರಸ್ತುತ ತಮ್ಮ ಬಳಿ ಇರುವ ಸಣ್ಣ ಕೈಗಾರಿಕೆ ಖಾತೆಯನ್ನು ಜಾರಕಿಹೋಳಿ ಅವರಿಗೆ ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. 
 
ಈ ಸಂಬಂಧ ಸಿಎಂ ಸಿದ್ದರಾಮಯ್ಯನವರೇ ಖುದ್ದು ಇಂದು ಸಂಜೆ ಅಧಿಕೃತ ಪ್ರಕಟಣೆಯೊಂದಿಗೆ ಘೋಷಿಸಲಿದ್ದಾರೆ ಎನ್ನಲಾಗಿದೆ. 

Share this Story:

Follow Webdunia kannada