ಬಿಡುಗಡೆ ಭರವಸೆಯಲ್ಲಿದ್ದ ಅರವಿಂದ್ ಕೇಜ್ರಿವಾಲ್ ಗೆ ಎನ್ಐಎ ಲಾಕ್

Krishnaveni K
ಮಂಗಳವಾರ, 7 ಮೇ 2024 (09:23 IST)
ನವದೆಹಲಿ: ಲೋಕಸಭೆ ಚುನಾವಣೆ ನೆಪದಲ್ಲಿ ಬಿಡುಗಡೆ ಭರವಸೆಯಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಈಗ ಎನ್ಐಎ ಸಂಕಷ್ಟ ಎದುರಾಗಿದೆ. ಹೀಗಾಗಿ ಅವರ ಬಿಡುಗಡೆ ಮತ್ತಷ್ಟು ಮುಂದೂಡಿಕೆಯಾಗುವ ನಿರೀಕ್ಷೆಯಿದೆ.

ಅಬಕಾರಿ ಅಕ್ರಮ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್ ರನ್ನು ಬಂಧಿಸಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿದೆ. ಚುನಾವಣೆ ಗಮನದಲ್ಲಿಟ್ಟುಕೊಂಡು ಅವರಿಗೆ ಮಧ್ಯಂತಹ ಜಾಮೀನು ನೀಡುವ ಬಗ್ಗೆ ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಆದರೆ ಈಗ ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ನಿಂದ ಆಮ್ ಆದ್ಮಿ ಪಕ್ಷಕ್ಕೆ ರಾಜಕೀಯ ಫಂಡ್ ಪಡೆಯಲಾಗಿದೆ ಎಂದು ಆರೋಪಿಸಿ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿದ್ದಾರೆ.

ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುವಾಗುವಂತೆ ಮತ್ತು ಖಲಿಸ್ತಾನಿ ಪರ ಭಾವನೆಗಳನ್ನು ಪ್ರಚೋದಿಸಲು ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಕೇಜ್ರಿವಾಲ್ ಗೆ ಉರುಳಾಗಿದೆ. ಈ ಪ್ರಕರಣವನ್ನು ಎನ್ಐಎ ತನಿಖೆ ನಡೆಸಲಿದ್ದು ಕೇಜ್ರಿವಾಲ್ ಬಿಡುಗಡೆಗೆ ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments