ಭ್ರಷ್ಟಾಚಾರ: ಯಡಿಯೂರಪ್ಪಗೆ ಸಚಿವ ಎಂ.ಬಿ.ಪಾಟೀಲ್ ಸವಾಲ್

Webdunia
ಶನಿವಾರ, 24 ಮಾರ್ಚ್ 2018 (16:00 IST)
ಬಿ.ಎಸ್. ಯಡಿಯೂರಪ್ಪ ಹಿರಿಯರಾದರೂ ಮೂರ್ಖತನ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ವಿಶ್ವೇಶ್ವರಯ್ಯ ಜಲ ‌ನಿಗಮ ಕಾಮಗಾರಿಯ ಫೈಲನ್ನು ಯಡಿಯೂರಪ್ಪ‌ವರಿಗೆ ಕೊಟ್ಟು ಕಳಿಸುತ್ತೇನೆ. ಅವರು ಎಕ್ಸಫರ್ಟ್ ಕರೆಯಿಸಿ ಅದನ್ನು ಮೊದಲು ಪರಿಶೀಲಿಸಲಿ ಎಂದು ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ ವಿಜಯಪುರದಲ್ಲಿ ಸವಾಲು ಹಾಕಿದ್ದಾರೆ.
ಇನ್ನು ಕಾಮಗಾರಿ ಗುತ್ತಿಗೆ ಪಡೆದವರು ಸರಿಯಾದ ದಾಖಲಾತಿ ನೀಡಿಲ್ಲ.ಕಾರಣ ಅವರ ಇಎಂಡಿ ಮುಟ್ಟುಗೋಲು ಹಾಕಿ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ ಎಂದರು. ಈ‌ ವಿಷಯದಲ್ಲಿ ಯಡಿಯೂರಪ್ಪ ಅವರ ಬಗ್ಗೆ ಕನಿಕರ ಮೂಡುತ್ತಿದೆ. ಯಡಿಯೂರಪ್ಪ ಮೂರ್ಖತನದಿಂದ ಇದ್ದಾರೆ ಎಂದು ವ್ಯಂಗ್ಯವಾಡಿದರು. ಇನ್ನು ಐಟಿ  ರೇಡ್ ಮೂಲಕ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕಲಾಗುತ್ತಿದೆ. ಸಚಿವ ಡಿ. ಕೆ. ಶಿವಕುಮಾರ ಮನೆ ಮೇಲೆ ದಾಳಿ ಮಾಡಿದ್ದರು. ಈಗ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ನನ್ನ  ಮೇಲೆ ಐಟಿ ದಾಳಿ ಮಾಡಲಿದ್ದಾರೆ ಎಂದರು. 
 
ಅಲ್ಲದೆ ಕಾಂಗ್ರೇಸ್ ನಾಯಕರ ಮೇಲಿನ‌  ಐಟಿ ರೇಡ್ ನಂತೆ  ಬಿಜೆಪಿ ‌ನಾಯಕರಾದ ಶೋಭಾ ಕರಂದ್ಲಾಜೆ,  ಜಗದೀಶ್ ಶೆಟ್ಟರ್,  ಆರ್ ಅಶೋಕ, ಈಶ್ವರಪ್ಪ ಮೇಲೆ ಐಟಿ ರೇಡ್ ಮಾಡಿಸಲಿ‌ ಎಂದು ಸವಾಲು ಹಾಕಿದರು. ಇನ್ನು ಚುನಾವಣೆಯ ‌ಸಂದರ್ಭದಲ್ಲಿ ಪಕ್ಷಾಂತರ ನಡೆಯುತ್ತದೆ. ಕಾಂಗ್ರೆಸ್ ಪಕ್ಷಕ್ಕೂ ಬರಲು ಬಿಜೆಪಿಯ ಅನೇಕ‌ ನಾಯಕರು ಅರ್ಜಿ ಹಾಕಿದ್ದಾರೆ ಎಂದರು.
 
ಈ ಮೂಲಕ ಮುಂಬರುವ ದಿನಗಳಲ್ಲಿ  ಬಿಜೆಪಿಯವರೂ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಮುನ್ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಣೆ, ಪ್ರಮಾಣ ವಿವಾದದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿವೈ ವಿಜಯೇಂದ್ರ

ವಾಣಿಜ್ಯ ಎಲ್ ಪಿಜಿ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ಬೇಡ ಕಂದಾ.... ವಿದ್ಯುತ್ ಸ್ಪರ್ಶಿಸಲು ಹೋದ ಮರಿಯನ್ನು ಕೋತಿ ಹೇಗೆ ರಕ್ಷಿಸಿತು ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments