Webdunia - Bharat's app for daily news and videos

Install App

ಕನ್ನಡಿಗರಿಗೆ ಎಂ.ಬಿ.ಬಿ.ಎಸ್ ಸೀಟು; ಮೀಸಲು ಸಂಬಂಧ ಮಹತ್ವದ ಸಭೆ

Webdunia
ಬುಧವಾರ, 19 ಜೂನ್ 2019 (14:58 IST)
ಕೇಂದ್ರ ಸರ್ಕಾರ ಜಾರಿಗೆ ತಂದ ನೀಟ್ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸುಗಳ ಪ್ರವೇಶ ಗಗನ ಕುಸುಮವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 50 ರಷ್ಟು ಸೀಟುಗಳನ್ನು ಮೀಸಲಿಡುವಂತೆ ಕೋರಲು ರಾಜ್ಯ ಸರ್ಕಾರ ಮಹತ್ವದ ಸಭೆ ಕರೆದಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಜತೆ ಜೂನ್ 20 ರ ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದ ಕೊಠಡಿ ಸಂಖ್ಯೆ 242 ರಲ್ಲಿ ಸರ್ಕಾರ ಮಾತುಕತೆ ನಡೆಸಲಿದೆ.

ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಪ್ರಮುಖರು, ಸ್ವಾಯತ್ರ ವಿ.ವಿ.ಗಳ ಆಡಳಿತ ಮಂಡಳಿ ಪ್ರಮುಖರು, ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಈ ನಾಲ್ಕೂ ಬಗೆಯ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡಾ 50 ರಷ್ಟು ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡುವ ಸಂಬಂಧ ಚರ್ಚಿಸಲಿರುವ ಸಚಿವ ತುಕಾರಾಂ, ಮಾತುಕತೆಯ ನಂತರ ಈ ಕುರಿತು ಅಧಿಕೃತ ಕಾಯ್ದೆಯನ್ನು ರೂಪಿಸಲು ಬಯಸಿದ್ದಾರೆ.

ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಶೇಕಡಾ ಐದರಷ್ಟು ವಿದ್ಯಾರ್ಥಿಗಳಿಗೂ ಕರ್ನಾಟಕದಲ್ಲಿ ಸೀಟು ದೊರೆಯುತ್ತಿಲ್ಲ.

ಬಹುತೇಕರಿಗೆ ಪರರಾಜ್ಯಗಳಲ್ಲಿ ಸೀಟು ಸಿಗುವುದರಿಂದ ಅವರು ಅಲ್ಲಿಗೆ ಹೋಗದೆ ಇಲ್ಲೇ ಬೇರೆ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದಿನ ಕೆಲ ವರ್ಷಗಳಲ್ಲಿ ಕರ್ನಾಟಕದವೇ ಆದ ಡಾಕ್ಟರುಗಳ ಸಂಖ್ಯೆಯೇ ಕ್ಷೀಣಿಸಿಹೋಗುತ್ತದೆ ಎಂಬುದು ಸರ್ಕಾರದ ಆತಂಕ.

ಇದೇ ಆತಂಕದ ಹಿನ್ನೆಲೆಯಲ್ಲಿ ನೆರೆಯ ತಮಿಳ್ನಾಡು ಸರ್ಕಾರ ಕಾಯ್ದೆಯೊಂದನ್ನು ರೂಪಿಸಿ ಖಾಸಗಿ ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, ಸಭಾಷಾ ಅಲ್ಪಸಂಖ್ಯಾತ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ನಿರ್ದಿಷ್ಟ ಪ್ರಮಾಣದ ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಮಾಡಿದೆ.

ಈಗ ತಮಿಳ್ನಾಡಿನ ಮಾದರಿಯಲ್ಲಿಯೇ ರಾಜ್ಯದ ವಿದ್ಯಾರ್ಥಿಗಳ ಹಿತ ರಕ್ಷಿಸಲು ಮುಂದಾಗಿರುವ ಸರ್ಕಾರ ಈ ಸಂಬಂಧ ಸರಣಿ ಸಭೆಗಳನ್ನು ನಡೆಸಿದ್ದು, ಕೆಲ ದಿನಗಳ ಹಿಂದೆ ನಡೆದ ಸಭೆಯಲ್ಲಿ ಎಂ.ಡಿ ಸೀಟುಗಳಲ್ಲಿ ಶೇಕಡಾ 57 ರಷ್ಟನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲು ಈ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಒಪ್ಪಿವೆ.

ಅದರ ಪ್ರಕಾರ ಸುಮಾರು 3500 ಎಂ.ಡಿ.ಸೀಟುಗಳ ಪೈಕಿ ಸುಮಾರು 1900 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ ಎಂದು ಮೂಲಗಳು ಹೇಳಿದ್ದು, ಎಂ.ಡಿ.ಸೀಟುಗಳ ರೀತಿಯೇ ಎಂ.ಬಿ.ಬಿ.ಎಸ್.ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ 50 ರಷ್ಟು ಸೀಟುಗಳು ದಕ್ಕಿದರೆ ರಾಜ್ಯದ  ಎರಡು ಸಾವಿರ ಮಂದಿಗೆ ಪ್ರವೇಶಾವಕಾಶ ಲಭ್ಯವಾಗಲಿದೆ ಎಂದು ಮೂಲಗಳು ವಿವರಿಸಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಮುಂದಿನ ಸುದ್ದಿ
Show comments