ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತ್ತಿದ್ದು, ಅವರು ಆತ್ಮಹತ್ಯೆಗೂ ಮುಂಚೆ ತಮ್ಮ ಸರ್ವಿಸ್ ರಿವಾಲ್ವಾರ್ನಿಂದ ಗುಂಡು ಹಾರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಸೋಮವಾರಪೇಟೆಯ ರಂಗಸಮುದ್ರದ ಗ್ರಾಮದ ಗಣಪತಿ ಅವರಿಗೆ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾವಣೆಯಾಗಿತ್ತು. ಇವರು ನಿನ್ನೆ ಸಾಯಂಕಾಲ ಮಡಿಕೇರಿಯ ವಿನಾಯಕ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಮೈಸೂರು ಮಂಗಳೂರಿನಲ್ಲಿ ನಡೆದ ಕೋಮುಗಲಭೆ ನಿಯಂತ್ರಿಸಿ ಇನ್ಸ್ಪೆಕ್ಟರ್ ಗಣಪತಿ ಎಂದೆ ಖ್ಯಾತಿ ಪಡೆದಿದ್ದರು. ಇವರು ಆತ್ಮಹತ್ಯೆಗೆ ಮುನ್ನ ಖಾಸಗಿ ಸುದ್ದಿವಾಹಿನಿಯ ಜೊತೆ ಮಾತನಾಡಿದ್ದು, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಮೂವರು ಅಧಿಕಾರಿಗಳು ವಿರುದ್ಧ ಆರೋಪ ಮಾಡಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.