Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆಯಲ್ಲಿ ಕೆ.ಜೆ.ಜಾರ್ಜ್ ಕೈವಾಡವಿಲ್ಲ: ಜಿ ಪರಮೇಶ್ವರ್

Webdunia
ಶನಿವಾರ, 9 ಜುಲೈ 2016 (12:07 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡವಿಲ್ಲ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡ ಕಂಡುಬರುತ್ತಿಲ್ಲ. ಡಿವೈಎಸ್‌ಪಿ ಗಣಪತಿ ಅವರು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದ ವೀಡಿಯೋದಲ್ಲಿ ಜಾರ್ಜ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ, ತನಿಖೆಯ ನಂತರವಷ್ಟೆ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. 
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆಯ ವರದಿ ಬರುವವರೆಗೂ ಏನು ಹೇಳಲು ಬರುವುದಿಲ್ಲ ಎಂದು ಹೇಳಿದರು.
 
ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ್ ಬಂಡೆ ಅವರ ಪತ್ನಿ ಮಲ್ಲಮ್ಮ ಸಾವಿಗೆ ವಿಷಾದ ವ್ಯಕ್ತಪಡಿಸಿದ ಗೃಹ ಸಚಿವರು, ಬಂಡೆ ಕುಟುಂಬಕ್ಕೆ ನೀಡಬೇಕಾಗಿದ್ದ ಪರಿಹಾರವನ್ನು ಈಗಾಗಲೇ ನೀಡಿದ್ದೇವೆ. ಅವರ ಮಕ್ಕಳಿಗೆ ಸರಕಾರದಿಂದ ಉಚಿತ ಶಿಕ್ಷಣವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments