Webdunia - Bharat's app for daily news and videos

Install App

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

Krishnaveni K
ಬುಧವಾರ, 6 ಆಗಸ್ಟ್ 2025 (14:12 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಥರಾ ಪ್ರತಾಪ್ ಸಿಂಹ ಮೊಬೈಲ್ ಏನಾದ್ರೂ ಪರಿಶೀಲನೆ ಮಾಡಿದ್ರೆ ಸೀದಾ ಜೈಲಿಗೇ ಹಾಕಬೇಕಾಗುತ್ತದೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಣಣ್ ವಾಗ್ದಾಳಿ ನಡೆಸಿದ್ದಾರೆ.

ಡಾ ಯತೀಂದ್ರ ಇತ್ತೀಚೆಗೆ ತಮ್ಮ ತಂದೆ ಸಿದ್ದರಾಮಯ್ಯ ಮೈಸೂರಿಗೆ ಅಭಿವೃದ್ಧಿ ಮಾಡಿದ ವಿಚಾರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಂತೆ ಗ್ರೇಟ್ ಎಂದಿದ್ದರು. ಅವರ ಹೇಳಿಕೆಯನ್ನು ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಇದಕ್ಕೆ ಇಂದು ಎಂ ಲಕ್ಷಣ ತಿರುಗೇಟು ನೀಡಿದ್ದಾರೆ.

‘ನಮ್ಮ ಡಾ ಯತೀಂದ್ರ ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಬಿಜೆಪಿಯಲ್ಲಿ ಕೇಳ್ತೀನಿ. ಮಹಾರಾಜರು ಶಿಕ್ಷಣ ಸಂಸ್ಥೆ, ಕುಡಿಯುವ ನೀರು, ಆಸ್ಪತ್ರೆಗಳು ಕೊಟ್ರು. ಅದೇ ರೀತಿ ಮಾನ್ಯ ಸಿದ್ದರಾಮಯ್ಯನವರು ಕುಡಿಯುವ ನೀರು ಕೊಟ್ಟಿದ್ದಾರೆ. 12 ಆಸ್ಪತ್ರೆ ಕೊಟ್ಟಿದ್ದಾರೆ. ಶಿಕ್ಷಣ ಸಂಸ್ಥೆ ಕಟ್ಟುವ ಕೆಲಸ ಮಾಡಿದ್ದಾರೆ. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಬಳಿಕ ಮೈಸೂರಿನ ಅಭಿವೃದ್ಧಿ ಮಾಡಿದ ನಾಯಕರೆಂದರೆ ಅದು ಸಿದ್ದರಾಮಯ್ಯನವರೇ. ಇದನ್ನು ನಾನು ಬಿಜೆಪಿಯವರಿಗೆ ಚಾಲೆಂಜ್ ಮಾಡಿ ಹೇಳ್ತೀನಿ. ಮಾಡಿದ್ದನ್ನು ಹೇಳಲು ನಮಗೆ ನಾಚಿಕೆಯಿಲ್ಲ. ಟಿಪ್ಪು ಎಂದು ಹೆಸರು ಕೇಳಿದ್ರೆ ಸಾಕು ಬಿಜೆಪಿಯವರು ಮಲಗಿದ್ದವರು ಏಳ್ತಾರೆ.

ಪಾಪ ಮಾಜಿ ಸಂಸದರೇ ನಿಮ್ಮ ಮೊಬೈಲ್ ಏನಾದ್ರೂ ಸೀಸ್ ಮಾಡಿ ಎಸ್ಐಟಿಗೆ ಕೊಟ್ಟುಬಿಟ್ರೆ ಪ್ರಜ್ವಲ್ ಇದ್ದಾನಲ್ಲಾ ಅವರ ಥರಾ ಜೈಲಿಗೆ  ಹೋಗ್ತೀರಿ. ಮೈಸೂರಿಗೆ ನಿಮ್ಮ ಕೊಡುಗೆ ಏನಪ್ಪಾ ಅದನ್ನು ಹೇಳಪ್ಪ.. ಅದು ಬಿಟ್ಟು ಪ್ರತಿನಿತ್ಯ ಟೀಕೆ ಮಾಡೋದನ್ನು ಮೊದಲು ನಿಲ್ಲಿಸಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments