Select Your Language

Notifications

webdunia
webdunia
webdunia
webdunia

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ?

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ?
ಬೆಂಗಳೂರು , ಸೋಮವಾರ, 20 ಮಾರ್ಚ್ 2023 (12:52 IST)
ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡುವಂತೆ ಹೈಕೋರ್ಟ್ ಗೆ ಲೋಕಾಯುಕ್ತ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡಿತು.

ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ರೂ ಕೂಡ ತನಿಖೆಗೆ ಸಹಕಾರವನ್ನು ನೀಡುತ್ತಿಲ್ಲ. ದಿನಾ ವಿಚಾರಣೆಗೆ ಬರುತ್ತಾರೆ, ತನಿಖಾಧಿಕಾರಿಗೆ ಯಾವುದೇ ಹೇಳಿಕೆ ನೀಡುತ್ತಾ ಇಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಎಂದು ವಾದ ಮಂಡಿಸಿದ್ರು. 

ಇತ್ತ ವಿರೂಪಾಕ್ಷಪ್ಪ ತನಿಖೆಗೆ ಸಹಕಾರ ನೀಡುತ್ತಾ ಇದ್ದಾರೆ, ಪ್ರತಿದಿನ 6 ಗಂಟೆಗಳ ಕಾಲ ವಿಚಾರಣೆ ಎದುರಿಸ್ತಾ ಇದ್ದಾರೆ ಎಂದು ವಿರೂಪಾಕ್ಷಪ್ಪ ಪರ ವಾದ ಮಂಡನೆ ಮಾಡಿದ್ರು. ಎರಡೂ ಕಡೆ ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ!