ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ನೋಡ ನೋಡುತ್ತಿದ್ದಂತೇ ಧರೆಗುರುಳಿದ ತೇರು: ಭಯಾನಕ ವಿಡಿಯೋ

Krishnaveni K
ಸೋಮವಾರ, 24 ಮಾರ್ಚ್ 2025 (11:32 IST)
Photo Credit: X
ಬೆಂಗಳೂರು: ನಗರದ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ನೋಡು ನೋಡುತ್ತಿದ್ದಂತೇ ಬೃಹತ್ ತೇರು ಬೀಳುವ ದೃಶ್ಯವೊಂದು ವೈರಲ್ ಆಗಿದೆ. ಈ ಘಟನೆಯಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು ಹಲವರಿಗೆ ಗಾಯವಾಗಿದೆ.

ಮಾರ್ಚ್ 22, 23 ರಂದು ಮದ್ದೂರಮ್ಮ ಜಾತ್ರೆಯಿತ್ತು. ಈ ಜಾತ್ರೆಯಲ್ಲಿ ಪ್ರತೀ ವರ್ಷವೂ ಆಕರ್ಷಕ ತೇರು ಎಲ್ಲರ ಗಮನ ಸೆಳೆಯುತ್ತದೆ. ಈ ಬಾರಿಯೂ ಬಣ್ಣ ಬಣ್ಣದ ಆಕರ್ಷಕ ತೇರು ಎಲ್ಲರ ಗಮನ ಸೆಳೆದಿತ್ತು.

ಹಲವರು ಜಾತ್ರೆಯಲ್ಲಿ ಪಾಲ್ಗೊಂಡು ತೇರು ಎಳೆಯುವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ತೇರು ಸುಮಾರು 20-25 ಅಡಿ ಎತ್ತರವಿರುತ್ತದೆ. ಬಹಳ ಶ್ರಮವಹಿಸಿ ಇದನ್ನು ನಿರ್ಮಿಸಲಾಗುತ್ತದೆ.

ಆದರೆ ಈ ಬಾರಿ ಅದೇನಾಯಿತೋ, ಇದ್ದಕ್ಕಿದ್ದಂತೇ ಮೆರವಣಿಗೆ ವೇಳೆ ತೇರು ಕುಸಿದು ಬಿದ್ದಿದೆ. ಪರಿಣಾಮ ಅಕ್ಕಪಕ್ಕದಲ್ಲಿದ್ದವರ ಮೈಮೇಲೆ ತೇರು ಬಿದ್ದಿದೆ. ಘಟನೆಯಲ್ಲಿ ಗೊಂಬೆ ಮಾರಲೆಂದು ಬಂದಿದ್ದ 12 ವರ್ಷದ ಜ್ಯೋತಿ ಎಂಬ ಬಾಲಕಿ ಮತ್ತು ಲೋಹಿತ್ ಎಂಬ ಯುವಕ ಮೃತಪಟ್ಟಿದ್ದಾರೆ. ಉಳಿದಂತೆ ಹಲವರಿಗೆ ಗಾಯವಾಗಿದೆ. ಈ ಭೀಕರ ದೃಶ್ಯ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments