Webdunia - Bharat's app for daily news and videos

Install App

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

Krishnaveni K
ಶನಿವಾರ, 14 ಜೂನ್ 2025 (14:01 IST)
ಬೆಂಗಳೂರು: ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ತಮ್ಮ ಇಲಾಖೆ ಪ್ರಗತಿ ಸಾಧಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರ್ ಕೂಡಾ ಮೆಚ್ಚಿದ್ದಾರೆ ಎಂದಿದ್ದಾರೆ.

‘ನನ್ನ ಇಲಾಖೆ ಬೇರೆ ಇಲಾಖೆಯಂತಲ್ಲ. ಇಲ್ಲಿ ಪ್ರಗತಿ ಕಣ್ಣಿಗೆ ಕಾಣಿಸಲ್ಲ. ಆದರೆ ಶಿಕ್ಷಣ ಎಂದರೆ ದೇವರ ಕೆಲಸ. ನನ್ನ ಇಲಾಖೆಯಲ್ಲಿ ಬಹಳ ಸಮಸ್ಯೆಗಳಿತ್ತು. ಹೀಗಾಗಿ ಸ್ವಲ್ಪ ಹುಷಾರಾಗಿ ನೋಡ್ಕೊಂಡು ಮಾಡು ಎಂದು ಮುಖ್ಯಮಂತ್ರಿಗಳು ನನಗೆ ಅಧಿಕಾರ ಕೊಟ್ರು.

ನಿನ್ನೆ ನನ್ನ ಇಲಾಖೆಯ ಅಧಿಕಾರ ವಹಿಸಿ ಒಂದು ವರ್ಷವಾಗಿದೆ. ಒಂದೇ ವರ್ಷ ಮೂರು ಅವಕಾಶ ಕೊಟ್ಟ ಏಕೈಕ ರಾಜ್ಯ ನಮ್ಮದು. ಫೇಲ್ ಆದ ವಿದ್ಯಾರ್ಥಿಗಳಿಗೆ ಒಂದೇ ವರ್ಷದಲ್ಲಿ ಇಂಪ್ರೂವ್ ಮಾಡಲು ನಾವು ಅವಕಾಶ ಕೊಟ್ಟಿದ್ದೇವೆ. ಯಾವುದೇ ಫೀಸ್ ಇಲ್ಲದೇ ನಾವು ಪಾಸ್ ಆಗದೇ ಇರುವವರಿಗೆ ಅವಕಾಶ ಕೊಟ್ಟಿದ್ದೇವೆ.

ಮೊನ್ನೆ ರಿಸಲ್ಟ್ ಘೋಷಣೆ ಮಾಡಿದಾಗ ಮುಖ್ಯಮಂತ್ರಿಗಳು ವೆರಿ ಗುಡ್ ಮಧು ಎಂದರು. 84 ಸಾವಿರ ಮಕ್ಕಳು ಒಂದೆರಡು ವಿಷಯದಲ್ಲಿ ಕಳೆದುಕೊಂಡವರು ಎಲ್ಲರೂ ಪಾಸ್ ಆಗಿದ್ದಾರೆ. ಈವತ್ತು 51 ಮಕ್ಕಳು 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಪೂರ್ಣ ಅಂಕ ಪಡೆದುಕೊಂಡವರು ಸರ್ಕಾರೀ ಶಾಲೆಯಲ್ಲೂ ಇದ್ದಾರೆ. ಇದು ಪ್ರಗತಿ’ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments