Select Your Language

Notifications

webdunia
webdunia
webdunia
webdunia

ಮೌನ ಮುರಿದ ಮಾಧುಸ್ವಾಮಿ

ಮೌನ ಮುರಿದ ಮಾಧುಸ್ವಾಮಿ
ಚಿಕ್ಕನಾಯಕನಹಳ್ಳಿ , ಸೋಮವಾರ, 3 ಜುಲೈ 2023 (21:40 IST)
ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾಜಿ ಸಚಿವ ಮಾಧುಸ್ವಾಮಿ ಮೌನ ಮುರಿದಿದ್ದಾರೆ.ಚಿಕ್ಕನಾಯಕನಹಳ್ಳಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್​ಗೆ ಹೋಗೊ ದುಸ್ಥಿತಿ ನನಗೆ ಬಂದಿಲ್ಲ