Webdunia - Bharat's app for daily news and videos

Install App

ಆಗಸ್ಟ್ 26 ಕ್ಕೆ ಕೈ ಕಾರ್ಯಕರ್ತರಿಂದ ಮಡಿಕೇರಿ ಚಲೋ..!

Webdunia
ಭಾನುವಾರ, 21 ಆಗಸ್ಟ್ 2022 (18:20 IST)
ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ.ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಚಲೋಗೆ ಕಾಂಗ್ರೆಸ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್​ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ..ಕಾಂಗ್ರೆಸ್ ‌ ಆ. 26ರ ಬೆಳಗ್ಗೆ 10:30ಕ್ಕೆ ಪ್ರತಿಭಟನೆಗೆ ಕರೆ ನೀಡಿದೆ. ಮಡಿಕೇರಿಯ ಭಗವತಿ ನಗರದಲ್ಲಿರುವ ಎಸ್ ಪಿ ಕಚೇರಿ ಎದುರು ಪ್ರತಿಭಟನೆಗೆ ಕಾಂಗ್ರೆಸ್ ಕರೆ ಕೊಟ್ಟಿದ್ದು, ಚಲೋದಲ್ಲಿ ಭಾಗಿಯಾಗುವಂತೆ ಎಲ್ಲಾ ನಾಯಕರಿಗೆ ಸೂಚನೆ ನೀಡಲಾಗಿದೆ..ತೀವ್ರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ವಿರಾಜ್ಪೇಟೆಯ ಸಂಪತ್ ಎಂಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ರು.ಈ ಅಹಿತಕರ ಘಟನೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೂಲಕವೇ ಮಡಿಕೇರಿ ಚಲೋ ಕೈಗೊಳ್ಳಲು ತೀರ್ಮಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments