ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಮಳೆಯ ಕಂಟಕ

Webdunia
ಭಾನುವಾರ, 17 ಜುಲೈ 2022 (14:04 IST)
ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್‌ಗಳು ಹೊರಚಾಚಿದ್ದು, ಕಳಚಿ ಬೀಳುವ ಆತಂಕ ಮೂಡಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ‌.
 
ಮಡಿಕೇರಿಯಿಂದ ಮಂಗಳೂರಿಗೆ ಹೋಗುವವರು ಹಾಗೂ ಬರುವವರು ಮೇಕೇರಿ- ಅಪ್ಪಂಗಳ- ತಾಳತ್ತಮನೆ ಜಂಕ್ಷನ್ ಮಾರ್ಗದಲ್ಲಿ ಸಂಚರಿಸಬೇಕಿದೆ.
ಒಂದು ವಾರದಿಂದಲೂ ಸ್ಲ್ಯಾಬ್‌ಗಳು ಹೊರಚಾಚಿದ್ದವು. ತಡೆಗೋಡೆ ಕುಸಿದು ಬೀಳುವುದಿಲ್ಲ ಒಳಗೆ ನೀರು ಸೇರಿರುವುದರಿಂದ ಸ್ಲ್ಯಬ್ ಗಳು ಹೊರಚಾಚಿವೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಪ್ರತಿಪಾದಿಸಿದ್ದರು.
 
ಸಚಿವ ಆರ್.ಅಶೋಕ್, ಸಂಸದ ಪ್ರತಾಪಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಪರಿಶೀಲನೆ ನಡೆಸಿ, ತಜ್ಞರಿಂದ ಪರಿಶೀಲನೆ ನಡೆಸಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದರು.
 
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಡೆಗೋಡೆಗೆ ಪೈಪ್ ತೂರಿಸಿ ಮೋಟಾರ್ ಬಳಸಿ ನೀರನ್ನು ಹೊರತೆಗೆಯುವ ಪ್ರಯತ್ನವನ್ನೂ ನಡೆಸಿದ್ದರು. ಆದರೆ, ಸ್ಲ್ಯಾಬ್ ಗಳ ಹೊರಚಾಚುವಿಕೆ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿಗೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಿದ್ದವರಿಗೆ ಶಾಕ್: ಆ ರಾತ್ರಿ ಅಲ್ಲಿ ನಡೆದಿದ್ದೇನು Video

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ಮುಂದಿನ ಸುದ್ದಿ
Show comments