ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಕೊಡಗು ಜಿಲ್ಲಾ ಬಂದ್ಗೆ ಕರೆ ನೀಡಿದೆ.
ಕೊಡಗು ಜಿಲ್ಲೆ ಬಂದ್ಗೆ ಖಾಸಗಿ ಬಸ್ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬಿಜೆಪಿ, ಜೆಡಿಎಸ್ ಸೇರಿದಂತೆ ಹಲುವು ಹಿಂದೂ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, 1200 ಪೊಲೀಸ್ ಸಿಬ್ಬಂದಿ, 150 ಅಧಿಕಾರಿಗಳು, 25 ಕೆಎಸ್ಆರ್ಪಿ ಮತ್ತು 3 ಗಸ್ತು ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಎಸ್ಪಿ ರಾಜೇಂದ್ರ್ ಪ್ರಸಾದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.