Select Your Language

Notifications

webdunia
webdunia
webdunia
webdunia

ಕೋವಿಡ್ ನಿಯಮ ಉಲ್ಲಂಘಿಸಿದ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್

ಕೋವಿಡ್ ನಿಯಮ ಉಲ್ಲಂಘಿಸಿದ  ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್
ಕೊಡಗು , ಶನಿವಾರ, 17 ಅಕ್ಟೋಬರ್ 2020 (10:41 IST)
ಕೊಡಗು : ತಲಕಾವೇರಿಗೆ ಭಕ್ತರಿಗೆ ಪ್ರವೇಶ ನೀಡುವುದರ ಮೂಲಕ ಕೊವಿಡ್ ನಿಯಮವನ್ನು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಉಲ್ಲಂಘಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಡಿಸಿ ಸೂಚನೆ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ್ದರು.

ಆದರೆ ಶಾಸಕ ಅಪ್ಪಚ್ಚು ರಂಜನ್  ಅವರು ಪೊಲೀಸರನ್ನು ಪಕ್ಕಕ್ಕೆ ತಳ್ಳಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. 200ಕ್ಕೂ ಹೆಚ್ಚು ಭಕ್ತರಿಗೆ ಅವಕಾಶ ಕಲ್ಪಿಸಿದ್ದಾರೆ. ಆ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾರಿಯರ್ಸ್ ಮೃತಪಟ್ಟರೆ ಹುತಾತ್ಮರೆನ್ನಬೇಕು- ಡಾ.ಮಂಜುನಾಥ್ ಹೇಳಿಕೆ