Webdunia - Bharat's app for daily news and videos

Install App

ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿದೆ 'ಮದ್ರಾಸ್ ಐ'

Webdunia
ಶನಿವಾರ, 29 ಜುಲೈ 2023 (16:35 IST)
ಬಿಸಿಲು-ಮಳೆ, ಮೋಡ ಕವಿದ ವಾತಾವರಣದಿಂದಾಗಿ  ಮದ್ರಾಸ್ ಐ ಪ್ರಕರಣ ನಗರದಲ್ಲಿ ಹೆಚ್ಚಳವಾಗಿದೆ.ನೇತ್ರ ಚಿಕಿತ್ಸಾಲಯಗಳಿಗೆ ಭೇಟಿ ನೀಡುತ್ತಿರುವ ಹೊರರೋಗಿಗಳಲ್ಲಿ ಶೇ 20 ರಷ್ಟು ಮಂದಿಯಲ್ಲಿ ಸಮಸ್ಯೆ  ಇದೆ. ಕಣ್ಣುರಿ, ಕಣ್ಣಿನಲ್ಲಿ ನೀರು, ತುರಿಕೆ, ಕಣ್ಣು ಕೆಂಪಾಗುವುದು, ಕಣ್ಣಿನ ಊತ ಸೇರಿ ವಿವಿಧ ಸಮಸ್ಯೆಗಳಿಂದ ಜನ ಆಸ್ಪತ್ರೆಗಳತ್ತ ಮೊರೆ ಹೋಗ್ತಿದ್ದಾರೆ.
 
ಬೆಂಗಳೂರಿನ ಕಣ್ಣಿನ ಆಸ್ಪತ್ರೆಗಳಾದ ಮಿಂಟೊ, ನಾರಾಯಣ ನೇತ್ರಾಲಯ, ಡಾ.ಅಗರವಾಲ್ಸ್ ಐ ಹಾಸ್ಪಿಟಲ್, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಶೇ 10ರಷ್ಟು ಹೆಚ್ಚಳವಾಗಿದೆ.ಕಳೆದೊಂದು ತಿಂಗಳಿಂದ ನಗರದಲ್ಲಿ ಬಿಸಿಲು-ಮಳೆಯಿಂದಾಗಿ ವಾತಾವರಣದಲ್ಲಿ ತೇವಾಂಶ ಹೆಚ್ಚಳವಾಗಿದೆ.ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾದರೆ, ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.ಚಳಿಯ ವಾತಾವರಣವಿದ್ದು, ವೇಗವಾಗಿ ವೈರಾಣು ಹರಡುತ್ತಿದೆ. 'ಮದ್ರಾಸ್ ಐ' ಸಮಸ್ಯೆ ಹಿರಿಯರಿಗಿಂತಲೂ ಮಕ್ಕಳಲ್ಲಿ ಹೆಚ್ಚು ಕಂಡುಬರುತ್ತಿದೆ.
 
ಮಿಂಟೊ ಆಸ್ಪತ್ರೆಗೆ ಪ್ರತಿ ನಿತ್ಯ 400ರಿಂದ 600 ಹೊರರೋಗಿಗಳು ಭೇಟಿ ನೀಡಿದ್ದಾರೆ.90ರಿಂದ 100 ರೋಗಿಗಳಲ್ಲಿ ಈ ಸಮಸ್ಯೆ ದೃಢಪಟ್ಟಿದೆ.ನಾರಾಯಣ ನೇತ್ರಾಲಯದಲ್ಲಿ ಪ್ರತಿನಿತ್ಯ ಸರಾಸರಿ 20 ಪ್ರಕರಣಗಳು ವರದಿಯಾಗಿದೆ.
 
'ಮದ್ರಾಸ್ ಐ' ಲಕ್ಷಣಗಳು
 
* ಕಣ್ಣುಗುಡ್ಡೆಯ ಊತ 
* ರೆಪ್ಪೆ ಅಂಟಿಕೊಳ್ಳುವುದು
* ಕಣ್ಣಿನ ಬಣ್ಣ ಗುಲಾಬಿ ಅಥವಾ ಕೆಂಪು ಬಣ್ಣಕ್ಕೆ ತಿರುಗುವುದು
* ಕಣ್ಣಲ್ಲಿ ಅತಿಯಾಗಿ ನೀರು ಬರುವಿಕೆ
* ಕಣ್ಣು ಅತಿಯಾಗಿ ತುರಿಕೆ ಆಗುವಿಕೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments