Publish Date: Wed, 28 Mar 2018 (18:44 IST)
Updated Date: Wed, 28 Mar 2018 (18:46 IST)
ರಾಮನಗರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಮಾಗಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ತಮ್ಮ ಜಿ.ಪಂ. ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಾಗಡಿ ತಾಲೂಕಿನ ಕುದೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಎ. ಮಂಜುನಾಥ್ ಜಿ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ರಾಮನಗರ ಜಿಲ್ಲಾ ಪಂಚಾಯಿತಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಮಂಜುನಾಥ್ ಅವರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಿ.ಪಿ. ರಾಜೇಶ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.