Webdunia - Bharat's app for daily news and videos

Install App

ಮಹಾದಾಯಿ: ಮತ್ತೆ ಗೋವಾ ಕ್ಯಾತೆ

Webdunia
ಬುಧವಾರ, 25 ಜುಲೈ 2018 (18:15 IST)
ಇನ್ನೇನು ಮಹದಾಯಿ ರಾಜ್ಯದ ಅಂತಿಮ ತೀರ್ಪು ಹೊರ ಬರುತ್ತದೆ ಎಂಬ ಆಶಾ ಭಾವನೆ ಮೂಡಿರುವಾಗಲೇ ಗೋವಾ ಸರಕಾರ ಮತ್ತೆ ಹೊಸ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನ್ಯಾಯಾಧಿಕರಣದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ, ಅಂತಿಮ ತೀರ್ಪು ತಡೆಯುವ ಹುನ್ನಾರ ನಡೆಸಿದೆ.  ಆ ಮೂಲಕ ಕನ್ನಡಿಗರ ಕಣ್ಣು ಕೆಂಪಗಾಗಿಸಿದೆ.

ಆಗಷ್ಟ್ ಎರಡನೇ ವಾರದಲ್ಲಿ ಮಹದಾಯಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಗೋವಾ ಸರಕಾರ ಶತಾಯ-ಗತಾಯ ತೀರ್ಪು ತಡೆಹಿಡಿಯುವ ಹುನ್ನಾರ ನಡೆಸಿದೆಕರ್ನಾಟಕ ಸರಕಾರ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಿದೆ ಎಂದು ಆರೋಪಿಸಿ ನ್ಯಾಯಾಧಿಕರಣಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಲು ಮುಂದಾಗಿದೆ. ಕುರಿತು ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲೇಕರ್, ಗೋವಾದ ಅಧಿಕಾರಿಗಳ ತಂಡ ಕಳಸಾ-ಬಂಡೂರಿ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕರ್ನಾಟಕ ಅಕ್ರಮ ಕಾಮಗಾರಿ ಮೂಲಕ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಿರುವುದು ಕಂಡು ಬಂದಿದೆ. ಅದಕ್ಕಾಗಿ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

 
ಕರ್ನಾಟಕ ಸರ್ಕಾರ ನ್ಯಾಯಾಧೀಕರಣದ ವಿರುದ್ಧ ಎಂದೂ ಹೋಗಿಲ್ಲ. ಇಷ್ಟಾದರೂ  ಗೋವಾ ಸರಕಾರ ನಿರಾಧಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವುದು ಕನ್ನಡಿಗರ ಕಣ್ಣು ಕೆಂಪಗಾಗಿಸಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments