Webdunia - Bharat's app for daily news and videos

Install App

ಮಹಾಬಲೇಶ್ವರ ದೇವಾಲಯ; ಸರಕಾರದ ಸುಪರ್ದಿಯಲ್ಲಿ!

Webdunia
ಗುರುವಾರ, 11 ಅಕ್ಟೋಬರ್ 2018 (18:41 IST)
ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಾಲಯವು ರಾಜ್ಯ ಸರ್ಕಾರದ ಸುಪರ್ದಿಯಲ್ಲಿರಲಿದೆ.

ಸರಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ (ಮುಜರಾಯಿ) ಬಿ.ಎಸ್.ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ. ಈ ಆದೇಶದನ್ವಯ ದೇವಾಲಯವು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಇಲ್ಲ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೂ ದೇವಾಲಯದಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ.

ಆಡಳಿತಾಧಿಕಾರಿಯಾಗಿ ನೇಮಕಗೊಂಡ ಕೊಲ್ಲೂರು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ಎಚ್.ಹಾಲಪ್ಪ, ದೇವಾಲಯದ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ. ದೇವಸ್ಥಾನದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೆ.7ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಅದಕ್ಕೂ ಮುನ್ನ ದೇವಾಲಯದ ಆಡಳಿತಾಧಿಕಾರಿಯಾಗಿ ಹಾಲಪ್ಪ ಅವರು ಆ.30ರಂದು ಅಧಿಕಾರ ಸ್ವೀಕರಿಸಿದ್ದರು. ಹೀಗಾಗಿ, ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಅವರೇ ಆಡಳಿತಾಧಿಕಾರಿಯಾಗಿ ಇರಲಿ ಎಂದು ನಾಗರತ್ನಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments