Webdunia - Bharat's app for daily news and videos

Install App

ಮಹದಾಯಿ ತೀರ್ಪಿಗೆ ನೊಂದು ಶಾಸಕ ಸ್ಥಾನಕ್ಕೆ ರಾಜೀನಾಮೆ: ಅಶೋಕ ಪಟ್ಟಣ

Webdunia
ಶುಕ್ರವಾರ, 29 ಜುಲೈ 2016 (10:42 IST)
ಮಹದಾಯಿ ಮಧ್ಯಂತರ ತೀರ್ಪಿಗೆ ನೊಂದು ರಾಮದುರ್ಗ ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರೈತರ ಜೊತೆ ಸೇರಿ ಹೋರಾಟ ನಡೆಸಲು ಮುಂದಾಗಿದ್ದಾರೆ.
 
ಮಹದಾಯಿ ನ್ಯಾಯಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹೀಗಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ಜೊತೆ ನನ್ನ ಬೆಂಬಲಿಗರು ರಾಜೀನಾಮೆ ನೀಡುತ್ತಾರೆ ಎಂದು ತಿಳಿಸಿದರು.
 
ಅಶೋಕ ಪಟ್ಟಣ ಅವರ ಬೆಂಬಲಿಗರಾದ ಇಬ್ಬರು ಜಿಲ್ಲಾ ಪಂಚಾಯತ್ ಸದಸ್ಯರು, 9 ತಾಲೂಕು ಪಂಚಾಯತ್ ಸದ್ಯಸ್ಯರು ಸೇರಿದಂತೆ 28 ಗ್ರಾಮ ಪಂಚಾಯತ್ ಸದಸ್ಯರಿಂದಲೂ ರಾಜೀನಾಮೆ ಕೊಡಿಸಿ, ರೈತರ ಜೊತೆ ಸೇರಿ ಬೀದಿಗಿಳಿದು ಹೋರಾಟ ನಡೆಸುವುದುಗಿ ತಿಳಿಸಿದ್ದಾರೆ.
 
ತಮ್ಮ ರಾಜೀನಾಮೆ ಪತ್ರವನ್ನು ತಹಶೀಲ್ದಾರ ಅವರ ಮೂಲಕ ಸಭಾಪತಿ ಕೆ.ಬಿ.ಕೋಳಿವಾಡ ಅವರಿಗೆ ರವಾನಿಸಲು ನಿರ್ಧರಿಸಲಾಗಿದೆ ಎಂದು ರಾಮದುರ್ಗ ಶಾಸಕ ಹಾಗೂ ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments